ಮೈಸೂರು

ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರದ ಅಭಿವೃದ್ಧಿಗೆ ಬೆಂಬಲ : ಕೇಂದ್ರ ಸರ್ಕಾರದ ಭರವಸೆ

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂಬ ಭರವಸೆಯನ್ನು ಕೇಂದ್ರ ಶಿಕ್ಷಣ ಸಚಿವರಾದ ಡಾ. ಸುಕಾಂತ ಮಜುಂದಾರ್ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಕೇಂದ್ರ ಶಿಕ್ಷಣ ಸಚಿವರು ಸವಿವರವಾದ ಉತ್ತರ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು ಹಲವಾರು ವಿವರಗಳನ್ನು ಹಂಚಿಕೊಂಡಿದ್ದಾರೆ.

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಪೂರ್ಣ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸ್ವಾಯತ್ತತೆ ನೀಡಲಾಗಿಲ್ಲ, ಈ ಕೇಂದ್ರದ ಕಾರ್ಯಕ್ಷಮತೆ ಮತ್ತು ಸವಾಲುಗಳು ಹಾಗೂ ಕೇಂದ್ರದ ಸ್ವಾಯತ್ತತೆಗಾಗಿ ರಾಜ್ಯಸರ್ಕಾರ ಅಥವಾ ಕನ್ನಡ ಸಾಹಿತ್ಯ ಸಂಸ್ಥೆಗಳಿಂದ ಶಿಫಾರಸ್ಸುಗಳನ್ನು ಸ್ವೀಕರಿಸಿದೆಯೇ ಮತ್ತು ಇದರ ಸ್ವಾಯತ್ತ ಸ್ಥಾನಮಾನಕ್ಕಾಗಿ ಪ್ರಸ್ತಾಪ ಇದೆಯೇ? ಎಂದು ಕೇಂದ್ರ ಶಿಕ್ಷಣ ಸಚಿವರಿಂದ ಉತ್ತರ ಕೋರಲಾಗಿತ್ತು ಎಂದು ಸಂಸದರು ತಿಳಿಸಿದ್ದಾರೆ.

ಮೈಸೂರಿನಲ್ಲಿರುವ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯ (ಸಿಐಐಎಲ್) ಆವರಣದಲ್ಲಿ ಶಾಸ್ತ್ರೀಯ ಕನ್ನಡದ ಅತ್ಯುನ್ನತ ಅಧ್ಯಯನ ಕೇಂದ್ರ (ಸಿಇಎಸ್‌ಸಿಕೆ)ವನ್ನು ಈಗ ಕೋರಿಕೆಯ ಮೇರೆಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಚಿವರು ಉತ್ತರ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ – 2020 ಶಾಸ್ತ್ರೀಯ ಕನ್ನಡ ಮತ್ತು ಇತರ ಶಾಸ್ತ್ರೀಯ ಭಾಷೆಗಳನ್ನು ಒಳಗೊಂಡಂತೆ ಎಲ್ಲಾ ಭಾರತೀಯ ಭಾಷೆಗಳ ಪ್ರಚಾರಕ್ಕೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗಿದೆ. ಸಿಇಎಸ್‌ಸಿಕೆ ಸೇರಿದಂತೆ ಎಲ್ಲಾ ಶಾಸ್ತ್ರೀಯ ಕೇಂದ್ರಗಳ ಕಾರ್ಯಕ್ಷಮತೆಯನ್ನು ವ್ಯವಸ್ಥಿತವಾಗಿ ಪರಿಶೀಲಿಸಲು ಮತ್ತು ನಿರ್ಣಯಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಲಾಗಿದೆ. ಶಾಸ್ತ್ರೀಯ ಕನ್ನಡದ ಅತ್ಯುನ್ನತ ಅಧ್ಯಯನ ಕೇಂದ್ರದ ಬೆಳವಣಿಗೆಗೆ ಬೆಂಬಲ ನೀಡಲಾಗುತ್ತದೆ. ಕೇಂದ್ರದ ವಽತ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬದ್ಧವಾಗಿದೆ ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

8 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago