ಮೈಸೂರು

ರಾಯಭಾರಿ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರ ಮೈಸೂರಿನಲ್ಲಿ ಬಂಧನ

ಮೈಸೂರು: ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕ ರಾಯಭಾರಿ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ಸಹಕರಿಸಿದ್ದ ಶಂಕಿತ ಉಗ್ರನನ್ನು ಮೈಸೂರಿನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ್‌ನಗರದಲ್ಲಿ ಇಂದು(ಮೇ.15) ಎನ್‌ಐಎ ಅಧಿಕಾರಿಗಳು ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ಫೋನ್, ಪೆನ್ಡ್ರೈವ್, ಡ್ರೋನ್ ಮೊದಲಾದವು ಬಂಧಿತನ ಬಳಿ ಇದ್ದುದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀಲಂಕಾ ಪ್ರಜೆ ಮೊಹಮ್ಮದ್ ಸಕೀರ್ ಹುಸೇನ್ ಹಾಗೂ ಕೊಲಂಬೊದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರರಾಗಿರುವ ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕ ರಾಯಭಾರ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆ ಸಂಧರ್ಭದಲ್ಲಿ ಆರೋಪಿ ನೂರುದ್ದೀನ್‌ ಪಾಕಿಸ್ತಾನಿ ಪ್ರಜೆಯ ಆದೇಶದ ಮೇರೆಗೆ ನಕಲಿ ನೋಟುಗಳನ್ನು ಪೂರೈಸುವ ಮೂಲಕ ಪಾಕಿಸ್ತಾನ ಬೇಹುಗಾರಿಗೆ ಚಟುವಟಿಗೆಗೆ ಹಣಕಾಸು ಸಹಾಯ ಒದಗಿಸುತ್ತಿದ್ದ ಎಂದು ಎನ್‌ಐಎ ತನಿಖೆಯಿಂದ ಗೊತ್ತಾಗಿತ್ತು. ಈ ಸಂಬಂಧ ಎನ್‌ಐಎ 2014ರಲ್ಲಿ ನೂರುದ್ದೀನ್‌ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿತ್ತು.

2023ರ ಆಗಸ್ಟ್‌ನಲ್ಲಿ ಆರೋಪಿಯು ಜಾಮೀನಿನ ಮೇಲೆ ಹೊರಬಂದಿದ್ದು, ನಂತರ ಚೆನ್ನೈನ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ‘ಆರೋಪಿ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ನೂರುದ್ದೀನ್ ನಾಪತ್ತೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಿಚಾರಣೆಯನ್ನು ಈಗ ಮುಂದುವರಿಸಲಾಗುವುದು ಎಂದು ಎನ್ಐಎ ಮಾಹಿತಿ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago