ಮೈಸೂರು

ಗೃಹಿಣಿ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ

ಮೈಸೂರು : ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ.

ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ. ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈಕೆಯ ಪತಿ ಸೂರ್ಯ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ದರ್ಶಿನಿಯನ್ನು ದಾಖಲಿಸಿ ಪತ್ನಿಯ ಪೋಷಕರಿಗೆ ವಿಷಯ ತಿಳಿಸಿದ್ದಾನೆ. ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಪತಿ ಸೂರ್ಯನೇ ಪತ್ನಿಯನ್ನು ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಒಂದೂವರೆ ವರ್ಷದ ಹಿಂದೆ ಬೆಳಗೊಳ ಗ್ರಾಮದ ಸೂರ್ಯನ ಜೊತೆ ದರ್ಶಿನಿಯ ಪ್ರೇಮ ವಿವಾಹವಾಗಿತ್ತು. ಮನೆಯವರ ವಿರೋಧದ ನಡುವೆಯೂ ದರ್ಶಿನಿಯನ್ನು ಸೂರ್ಯ ಮದುವೆಯಾಗಿದ್ದ.ಮದುವೆಯಾದ 4 ತಿಂಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಪ್ರತಿ ದಿನ ವರದಕ್ಷಿಣೆ ತರುವಂತೆ ಮಗಳನ್ನು ಹಿಂಸಿಸುತ್ತಿದ್ದ. ಬದುಕಿ ಬಾಳಬೇಕಿದ್ದ ನನ್ನ ಮಗಳ ಜೀವನ ಕೊಲೆಯಲ್ಲಿ ಅಂತ್ಯವಾಗಿದೆ. ನನ್ನ ಮಗಳ ಸಾವಿಗೆ ನ್ಯಾಯ ಬೇಕು. ಸೂರ್ಯ ಮತ್ತು ಆತನ ಕುಟುಂಬಸ್ಥರನ್ನ ಬಂಧಿಸಬೇಕು ಎಂದು ಮೃತಳ ಪೋಷಕರು ಆಗ್ರಹಿಸಿದ್ದಾರೆ.

ಘಟನೆ ಸಂಬಂಧ ಕೆಆರ್‌ಎಸ್‌ ಠಾಣೆಯಲ್ಲಿ ಪತಿ ಹಾಗೂ ಮನೆಯವರ ವಿರುದ್ಧ ದರ್ಶನಿ ಪೋಷಕರು ದೂರು ನೀಡಿದ್ದಾರೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago