ಮೈಸೂರು : ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ.
ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ. ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈಕೆಯ ಪತಿ ಸೂರ್ಯ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ದರ್ಶಿನಿಯನ್ನು ದಾಖಲಿಸಿ ಪತ್ನಿಯ ಪೋಷಕರಿಗೆ ವಿಷಯ ತಿಳಿಸಿದ್ದಾನೆ. ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಪತಿ ಸೂರ್ಯನೇ ಪತ್ನಿಯನ್ನು ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಒಂದೂವರೆ ವರ್ಷದ ಹಿಂದೆ ಬೆಳಗೊಳ ಗ್ರಾಮದ ಸೂರ್ಯನ ಜೊತೆ ದರ್ಶಿನಿಯ ಪ್ರೇಮ ವಿವಾಹವಾಗಿತ್ತು. ಮನೆಯವರ ವಿರೋಧದ ನಡುವೆಯೂ ದರ್ಶಿನಿಯನ್ನು ಸೂರ್ಯ ಮದುವೆಯಾಗಿದ್ದ.ಮದುವೆಯಾದ 4 ತಿಂಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಪ್ರತಿ ದಿನ ವರದಕ್ಷಿಣೆ ತರುವಂತೆ ಮಗಳನ್ನು ಹಿಂಸಿಸುತ್ತಿದ್ದ. ಬದುಕಿ ಬಾಳಬೇಕಿದ್ದ ನನ್ನ ಮಗಳ ಜೀವನ ಕೊಲೆಯಲ್ಲಿ ಅಂತ್ಯವಾಗಿದೆ. ನನ್ನ ಮಗಳ ಸಾವಿಗೆ ನ್ಯಾಯ ಬೇಕು. ಸೂರ್ಯ ಮತ್ತು ಆತನ ಕುಟುಂಬಸ್ಥರನ್ನ ಬಂಧಿಸಬೇಕು ಎಂದು ಮೃತಳ ಪೋಷಕರು ಆಗ್ರಹಿಸಿದ್ದಾರೆ.
ಘಟನೆ ಸಂಬಂಧ ಕೆಆರ್ಎಸ್ ಠಾಣೆಯಲ್ಲಿ ಪತಿ ಹಾಗೂ ಮನೆಯವರ ವಿರುದ್ಧ ದರ್ಶನಿ ಪೋಷಕರು ದೂರು ನೀಡಿದ್ದಾರೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…