ಸರಗೂರು : ತಾಲೂಕಿನ ಕೊತ್ತೇಗಾಲ ಗ್ರಾಮದ ನಾಗಪ್ಪ ಬಿನ್ ಮಾದಪ್ಪ ಅವರ ಜಮೀನಿನಲ್ಲಿ ಶುಕ್ರವಾರ ಒಂಟಿ ದಂತದ ಆನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ವಿಷಯ ತಿಳಿದು ಸ್ಥಳಕ್ಕೆ ಸರಗೂರು ವಲಯದ ವಲಯ ಅರಣ್ಯಾಧಿಕಾರಿ ಎಸ್.ಹನುಮಂತರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಚ್.ಡಿ.ಕೋಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್ ಸಮಕ್ಷಮ ಬಂಡಿಪುರ ವಿಭಾಗದ ಪಶು ವೈದ್ಯಾಧಿಕಾರಿ ಮಿರ್ಜಾ ವಾಸಿಂ ಮರಣೋತ್ತರ ಪರೀಕ್ಷೆ ನಡೆಸಿದರು.
ವೈದ್ಯರ ಹೇಳಿಕೆಯಂತೆ ಗಂಡಾನೆಗೆ ಅಂದಾಜು 20 ವರ್ಷವಾಗಿದೆ ಎನ್ನಲಾಗಿದೆ. ಆನೆಯ ಮೃತದೇಹವನ್ನು ಸ್ಥಳದಲ್ಲೇ ಹೂಳಲಾಯಿತು. ಆನೆಯದು ಅನುಮಾನಾಸ್ಪದ ಸಾವು ಎಂದು ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್…
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ರದ್ದುಗೊಳಿಸಿದ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…