ಮೈಸೂರು

ನಾಳೆಯಿಂದ ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವ

ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ನದಿ ತೀರದ ತಟದಲ್ಲಿರುವ ಸುತ್ತೂರು ಶ್ರೀಕ್ಷೇತ್ರದಲ್ಲಿ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಾಳೆಯಿಂದ ಜನವರಿ.31ರವರೆಗೆ ನಡೆಯಲಿದೆ.

ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ನದಿ ತೀರದ ತಟದಲ್ಲಿರುವ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಾಳೆಯಿಂದ ಜನವರಿ.31ರವರೆಗೆ ನಡೆಯಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆ ನಡೆದಿದೆ.

೬ ದಿನಗಳ ಕಾಲ ಮಿನಿ ದಸರಾ ಮಹೋತ್ಸವದಂತೆ ನಡೆಯುವ ಸುತ್ತೂರು ಜಾತ್ರೆಗೆ ಸಕಲ ಸಿದ್ಧತೆಗಳು ಮಾಡಿಕೊಳ್ಳಲಾಗಿದ್ದು, ಶ್ರೀಕ್ಷೇತ್ರ ಸುತ್ತೂರು ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಸಾಮೂಹಿಕ ವಿವಾಹ, ಭಜನಾ ಮೇಳ, ವಸ್ತುಪ್ರದರ್ಶನ, ಕುಸ್ತಿ ಪಂದ್ಯಾವಳಿ, ದನಗಳ ಜಾತ್ರೆ, ನಾಟಕಗಳು, ಕೃಷಿ ಬ್ರಹ್ಮಾಂಡ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಜಾತ್ರಾ ಮಹೋತ್ಸವದಲ್ಲಿ ನಡೆಯಲಿವೆ.

ನಾಳೆ ವಸ್ತುಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳ, ಆರೋಗ್ಯ ತಪಾಸಣಾ ಶಿಬಿರ, ದೋಣಿವಿಹಾರ ನಡೆಯಲಿದ್ದು, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.

ಎಲ್ಲಾ ಕಾರ್ಯಕ್ರಮಗಳು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಸೇರಿದಂತೆ ವಿವಿಧ ಮಠಾಧೀಶರು ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ.

ಇನ್ನು ವಿಶೇಷವೆಂದರೆ ಜಾತ್ರೆಯಲ್ಲಿ ನಿತ್ಯ ೩ ಲಕ್ಷದಂತೆ ೨೦ ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಸಾದ ವಿನಿಯೋಗ ನಡೆಯಲಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

4 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

11 mins ago

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

49 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

1 hour ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

4 hours ago