ಮೈಸೂರು: ಸಾವಿರಾರು ಮಂದಿ ಜಯಘೋಷಗಳೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಇಂದು ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು.
ಸುತ್ತೂರಿನ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹೆಬ್ಬಾವಿನ ಗಾತ್ರದ ರಥದ ಹಗ್ಗವನ್ನು ಎಳದು ಹರಕೆ ತೀರಿಸಿದರು. ಬಳಿಕ ರಥಕ್ಕೆ ಹಣ್ಣು-ಜವನ ಎಸೆದು ರಥಕ್ಕೆ ನಮಿಸಿದರು.
ತಮಟೆ, ನಗಾರಿ ವಾದ್ಯಗಳ ನಾದ ಮುಗಿಲುಮುಟ್ಟಿತು. ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು.
ರಥೋತ್ಸವದದ ಮೆರವಣಿಗೆಯಲ್ಲಿ ಸಾಗಿದ ಹಲವು ಕಲಾತಂಡಗಳು ಮೈಸೂರು ದಸರೆಯನ್ನು ನೆನಪಿಸಿದವು.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನಡೆದ ರಥೋತ್ಸವದಲ್ಲಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಸೇರಿದಂತೆ ಹಲವು ರಾಜಕೀಯ ನಾಯಕರು ಭಾಗಿಯಾಗಿದ್ದರು.
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…
ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…