ಮೈಸೂರು: ಜನರಲ್ಲಿ ಸ್ವಚ್ಛತೆಯ ಕುರತು ಜಾಗೃತಿ ಮೂಡಿಸಲು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ-2025’ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್. ಯುಕೇಶ್ ಕುಮಾರ್ ತಿಳಿಸಿದ್ದಾರೆ.
ಈ ಪಾಕ್ಷಿಕ ಆಂದೋಲನ ಕಾರ್ಯಕ್ರಮದ ಅಂಗವಾಗಿ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಗ್ರಾಮದ ಪ್ರಮುಖ ಬೀದಿ, ಶಾಲಾ ಆವರಣ, ಆಟದ ಮೈದಾನ, ಜಲಮೂಲಗಳು, ಧಾರ್ಮಿಕ ಕೇಂದ್ರಗಳ ಸಮೀಪ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಗ್ರಾಮದ ಅತ್ಯಂತ ಹೆಚ್ಚು ತ್ಯಾಜ್ಯ ಸಂಗ್ರಹವಾಗುವ ಪ್ರದೇಶ ಮತ್ತು ಅಧಿಕ ಅನೈರ್ಮಲ್ಯ ಇರುವ ಸ್ಥಳಗಳನ್ನು ಗುರತಿಸಿ ಶ್ರಮದಾನ ಮಾಡುವ ಮೂಲಕ ಸಂಪೂರ್ಣ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು.
ಶೌಚಾಲಯ ಬಳಕೆ ಕುರಿತು ಪ್ರಭಾತ್ ಪೇರಿ ಚಟುವಟಿಕೆ, ಸಫಾಯಿ ಮಿತ್ರ ಸುರಕ್ಷಾ ಶಿಬಿರ, ಶಾಲಾ ಮಕ್ಕಳಲ್ಲಿ ಸ್ಲೋಗನ್ ಬರೆಯುವ ಸ್ಪರ್ಧೆ, ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಮತ್ತು ಓಡಿಎಪ್ ಪ್ಲಸ್ ಸುಸ್ಥಿರತೆ ಅಂಶಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಬೇಕು ಎಂದರು.
ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಾಲಯಗಳನ್ನು ಗುರುತಿಸಿ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಕುರಿತಂತೆ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸುವ ಚುವಟಿಕೆಗಳನ್ನು ಕೈಗೊಳ್ಳಬೇಕು, ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಹಾಗೂ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಕುರಿತಂತೆ ಅವರಿಗೆ ಮಾಹಿತಿ ನೀಡಬೇಕು ಎಂದರು.
25ನೇ ಸೆಪ್ಟೆಂಬರ್ ರಂದು ಒಂದು ದಿನ, ಒಂದು ಗಂಟೆ ಎಲ್ಲರೂ ಒಟ್ಟಿಗೆ ಶ್ರಮದಾನ (ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್) ಎಂಬ ಘೋಷವಾಕ್ಯದಡಿ ಸಾಮೂಹಿಕ ಶ್ರಮದಾನವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳಲಾಗುವುದು. ಸ್ವಚ್ಛತೆಗಾಗಿ ನಾಗರೀಕರು ಕೈಜೋಡಿಸಬೇಕೆಂದು ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಆಚರಿಸಲು, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…