ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಹುಲಿ ದಾಳಿ ಪ್ರಕರಣ
ಮೈಸೂರು: ದನ ಮೇಯಿಸುತ್ತಿರುವಾಗ ಹಠಾತ್ ಆಗಿ ಹುಲಿಯ ಆಕ್ರಮಣಕ್ಕೆ ತುತ್ತಾದ ಸ್ವಾಮಿ ದಾಸಯ್ಯ (೫೪) ಪ್ರಾಣಾಪಾಯದಿಂದ ಪಾರಾಗಿದ್ದೇ ರೋಚಕ ಕಥೆ.
ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಸೋಮವಾರ ಸಂಜೆ ತಮ್ಮ ಹಸು ಪೂಜಾಳನ್ನು ಮೇಯಿಸುತ್ತಿದ್ದ ಸಂದರ್ಭ ಧನಗಾಹಿಗಳಾದ ಶ್ರೀಕಂಠಮೂರ್ತಿ ಮತ್ತು ಕೂಸಪ್ಪ ಎಂಬವರು ಸಮೀಪದಲ್ಲಿಯೇ ದನ ಮೇಯಿಸುತ್ತಿದ್ದರು. ಹಸುವಿನ ಮೇಲೆ ಎರಗಲು ಬಂದ ಬಂದ ಹುಲಿ ಸ್ವಾಮಿ ದಾಸಯ್ಯನನ್ನು ಕಂಡು ಆತನ ಮೇಲೆ ಎರಗಿದೆ. ಅವರು ಕಿರುಚಿದ್ದನ್ನು ಕೇಳಿಸಿಕೊಂಡ ಶ್ರೀಕಂಠಮೂರ್ತಿ ಮತ್ತು ಕೂಸಪ್ಪ ಅಲ್ಲೇ ಬಿದ್ದಿದ್ದ ಕಲ್ಲನ್ನು ತೆಗೆದು ಹುಲಿಯತ್ತ ಎಸೆದು ಓಡಿಸುವ ಪ್ರಯತ್ನ ಮಾಡಿದರು. ಬೆದರಿದ ಹುಲಿ ಸ್ವಾಮಿಯನ್ನು ಬಿಟ್ಟು ಓಡಿ ಹೋದರೂ ತನ್ನ ಪಂಜದಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿದೆ. ಸ್ವಾಮಿ ಜರ್ಕಿನ್ ಧರಿಸಿದ್ದರಿಂದ ಎದೆ, ಹೊಟ್ಟೆ ಇತ್ಯಾದಿ ಭಾಗಕ್ಕೆ ಮಾರಣಾಂತಿಕ ಗಾಯವಾಗುವುದು ತಪ್ಪಿದೆ ಎನ್ನಲಾಗಿದೆ.
ಸ್ವಾಮಿಯನ್ನು ಆಸ್ಪತ್ರೆಗೆ ಸಾಗಿಸಲು ಹೊಲದ ಏರಿ ಮೇಲೆ ಕರೆದೊಯ್ಯುತ್ತಿರುವಾಗಲೇ ಹುಲಿ ಮತ್ತೆ ‘ಪೂಜಾ’ ಹಸುವಿನ ಮೇಲೆರಗಿ ಕೊಂದು ಹಾಕಿದೆ. ಬೆಳಿಗ್ಗೆ ಗ್ರಾಮಸ್ಥರು ನೋಡಿದಾಗ ಹುಲಿ ಶೇ.೯೦ರಷ್ಟು ಮಾಂಸ ಕಬಳಿಸಿದ್ದು ಕಂಡುಬಂತು.
‘ನಮ್ಮ ನೋವನ್ನು ಇಲಾಖಾಧಿಕಾರಿಗಳಿಗೆ ಹೇಳಿದರೆ ‘ಪಟಾಕಿ ಹೊಡೆಯಿರಿ ಓಡಿಹೋಗುತ್ತದೆ’ ಎಂದು ಹೇಳಿ ಪಟಾಕಿ ನೀಡುತ್ತಿದ್ದಾರೆ. ರಾತ್ರಿ ಎಂಟು ಗಂಟೆಗೆ ಮರದ ಮೇಲಿನ ಅಟ್ಟಣಿಗೆ ಏರಿದರೆ ಬೆಳಿಗ್ಗೆನೇ ಇಳಿಯುತ್ತೇವೆ. ಹೀಗಿದ್ದೂ ಪ್ರಾಣಿಗಳಿಂದ ಫಸಲು ಹಾನಿಯನ್ನು ತಪ್ಪಿಸಲಾಗಿಲ್ಲ’ ಎಂದು ಗ್ರಾಮಸ್ಥರಾದ ಮಲ್ಲಿಗಮ್ಮ, ಕಾಡಯ್ಯ,ರಾಜಶೇಖರ್, ಕಿರಣ್, ರಾಜಮ್ಮ, ಜ್ಯೋತಿ, ಸುಂದರಮ್ಮ, ಚಂದ್ರಿಕ, ಕುಮಾರ್, ಕೆಂಪರಾಜು, ದೇವರಾಜು ಮತ್ತಿತರರು ಪತ್ರಿಕೆ ಜತೆ ತಮ್ಮ ನೋವು ತೋಡಿಕೊಂಡರು.
ಬಳ್ಳೂರು ಹುಂಡಿ ಮಾತ್ರವಲ್ಲದೆ ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ನಾರಾಯಣಪುರ, ಅಂಜನಾಪುರ, ಈರೇ ಗೌಡನ ಕೊಪ್ಪಲು, ಗಣೇಶಪುರ, ಹರಿಯೂರು, ಹೆಡಿಯಾಲ, ಬೇಗೂರು ಮುಂತಾದ ಗ್ರಾಮಗಳಿಗೂ ವನ್ಯಪ್ರಾಣಿಗಳು ಆಹಾರ ಅರಸಿ ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…