ಮೈಸೂರು

ಸ್ವಾಮಿ ಪ್ರಾಣ ಉಳಿಸಿದ ದನಗಾಹಿಗಳ ಸಾಹಸ…

ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಹುಲಿ ದಾಳಿ ಪ್ರಕರಣ

ಮೈಸೂರು: ದನ ಮೇಯಿಸುತ್ತಿರುವಾಗ ಹಠಾತ್ ಆಗಿ ಹುಲಿಯ ಆಕ್ರಮಣಕ್ಕೆ ತುತ್ತಾದ ಸ್ವಾಮಿ ದಾಸಯ್ಯ (೫೪) ಪ್ರಾಣಾಪಾಯದಿಂದ ಪಾರಾಗಿದ್ದೇ ರೋಚಕ ಕಥೆ.

ಬಳ್ಳೂರು ಹುಂಡಿಯ ಹುಲ್ಲುಗಾವಲು ಪ್ರದೇಶದಲ್ಲಿ ಸೋಮವಾರ ಸಂಜೆ ತಮ್ಮ ಹಸು ಪೂಜಾಳನ್ನು ಮೇಯಿಸುತ್ತಿದ್ದ ಸಂದರ್ಭ ಧನಗಾಹಿಗಳಾದ ಶ್ರೀಕಂಠಮೂರ್ತಿ ಮತ್ತು ಕೂಸಪ್ಪ ಎಂಬವರು ಸಮೀಪದಲ್ಲಿಯೇ ದನ ಮೇಯಿಸುತ್ತಿದ್ದರು. ಹಸುವಿನ ಮೇಲೆ ಎರಗಲು ಬಂದ ಬಂದ ಹುಲಿ ಸ್ವಾಮಿ ದಾಸಯ್ಯನನ್ನು ಕಂಡು ಆತನ ಮೇಲೆ ಎರಗಿದೆ. ಅವರು ಕಿರುಚಿದ್ದನ್ನು ಕೇಳಿಸಿಕೊಂಡ ಶ್ರೀಕಂಠಮೂರ್ತಿ ಮತ್ತು ಕೂಸಪ್ಪ ಅಲ್ಲೇ ಬಿದ್ದಿದ್ದ ಕಲ್ಲನ್ನು ತೆಗೆದು ಹುಲಿಯತ್ತ ಎಸೆದು ಓಡಿಸುವ ಪ್ರಯತ್ನ ಮಾಡಿದರು. ಬೆದರಿದ ಹುಲಿ ಸ್ವಾಮಿಯನ್ನು ಬಿಟ್ಟು ಓಡಿ ಹೋದರೂ ತನ್ನ ಪಂಜದಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿದೆ. ಸ್ವಾಮಿ ಜರ್ಕಿನ್ ಧರಿಸಿದ್ದರಿಂದ ಎದೆ, ಹೊಟ್ಟೆ ಇತ್ಯಾದಿ ಭಾಗಕ್ಕೆ ಮಾರಣಾಂತಿಕ ಗಾಯವಾಗುವುದು ತಪ್ಪಿದೆ ಎನ್ನಲಾಗಿದೆ.

ಸ್ವಾಮಿಯನ್ನು ಆಸ್ಪತ್ರೆಗೆ ಸಾಗಿಸಲು ಹೊಲದ ಏರಿ ಮೇಲೆ ಕರೆದೊಯ್ಯುತ್ತಿರುವಾಗಲೇ ಹುಲಿ ಮತ್ತೆ ‘ಪೂಜಾ’ ಹಸುವಿನ ಮೇಲೆರಗಿ ಕೊಂದು ಹಾಕಿದೆ. ಬೆಳಿಗ್ಗೆ ಗ್ರಾಮಸ್ಥರು ನೋಡಿದಾಗ ಹುಲಿ ಶೇ.೯೦ರಷ್ಟು ಮಾಂಸ ಕಬಳಿಸಿದ್ದು ಕಂಡುಬಂತು.

‘ನಮ್ಮ ನೋವನ್ನು ಇಲಾಖಾಧಿಕಾರಿಗಳಿಗೆ ಹೇಳಿದರೆ ‘ಪಟಾಕಿ ಹೊಡೆಯಿರಿ ಓಡಿಹೋಗುತ್ತದೆ’ ಎಂದು ಹೇಳಿ ಪಟಾಕಿ ನೀಡುತ್ತಿದ್ದಾರೆ. ರಾತ್ರಿ ಎಂಟು ಗಂಟೆಗೆ ಮರದ ಮೇಲಿನ ಅಟ್ಟಣಿಗೆ ಏರಿದರೆ ಬೆಳಿಗ್ಗೆನೇ ಇಳಿಯುತ್ತೇವೆ. ಹೀಗಿದ್ದೂ ಪ್ರಾಣಿಗಳಿಂದ ಫಸಲು ಹಾನಿಯನ್ನು ತಪ್ಪಿಸಲಾಗಿಲ್ಲ’ ಎಂದು ಗ್ರಾಮಸ್ಥರಾದ ಮಲ್ಲಿಗಮ್ಮ, ಕಾಡಯ್ಯ,ರಾಜಶೇಖರ್, ಕಿರಣ್, ರಾಜಮ್ಮ, ಜ್ಯೋತಿ, ಸುಂದರಮ್ಮ, ಚಂದ್ರಿಕ, ಕುಮಾರ್, ಕೆಂಪರಾಜು, ದೇವರಾಜು ಮತ್ತಿತರರು ಪತ್ರಿಕೆ ಜತೆ ತಮ್ಮ ನೋವು ತೋಡಿಕೊಂಡರು.

ಬಳ್ಳೂರು ಹುಂಡಿ ಮಾತ್ರವಲ್ಲದೆ ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ನಾರಾಯಣಪುರ, ಅಂಜನಾಪುರ, ಈರೇ ಗೌಡನ ಕೊಪ್ಪಲು, ಗಣೇಶಪುರ, ಹರಿಯೂರು, ಹೆಡಿಯಾಲ, ಬೇಗೂರು ಮುಂತಾದ ಗ್ರಾಮಗಳಿಗೂ ವನ್ಯಪ್ರಾಣಿಗಳು ಆಹಾರ ಅರಸಿ ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

2 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago