ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳವಾರ(ಏ.೨೩) ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಅಧಿಕಾರಿಗಳು ಬೈಕ್ ಜಾಥಾ ಮೂಲಕ ಕಡ್ಡಾಯ ಮತದಾನದ ಅರಿವು ಮೂಡಿಸಿದರು.
ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಗನಾಥ್ ಮೂರ್ತಿ ಮಾತನಾಡಿ, ಮತದಾನವನ್ನು ಕಡ್ಡಾಯವಾಗಿ ಮಾಡಬೇಕು, ಮತ ಚಲಾಯಿಸುವುದು ಸಂವಿಧಾನದ ಹಕ್ಕಾಗಿದ್ದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು ಎಂದರು.
ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಮತದಾನ ಘೋಷವಾಕ್ಯಗಳ ಫಲಕ ಹಿಡಿದು ದ್ವಿಚಕ್ರ ವಾಹನ ಏರಿ ತಾಲ್ಲೂಕು ಪಂಚಾಯಿತಿಯಿಂದ ಅಂಬೇಡ್ಕರ್ ವೃತ್ತ, ಶ್ರೀಕಂಠೇಶ್ವರ ದೇವಸ್ತಾನ, ಎಂ.ಜಿ.ರಸ್ತೆ, ಮಾರುಕಟ್ಟೆ ರಸ್ತೆ, ದೇವಿರಮ್ಮನಹಳ್ಳಿ ಗೇಟ್ ಸರ್ಕಲ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಏಪ್ರಿಲ್ 26 ರಂದು ತಪ್ಪದೇ ಮತ ಚಲಾಯಿಸುವಂತೆ ಪ್ರೇರೇಪಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಸಹಾಯಕ ನಿರ್ದೇಶಕ ಶಿವಕುಮಾರ್, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿ ಸಿಬ್ಬಂದಿಗಳು ಹಾಜರಿದ್ದರು.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…