ಮೈಸೂರು

ಸಮಾಜಿಕ ಬಹಿಷ್ಕಾರ ಪದ್ದತಿಯನ್ನು ಬೇರು ಸಮೇತವಾಗಿ ಕೀಳಬೇಕು-ಶ್ಯಾಂಭಟ್

ಮೈಸೂರು: ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ ಬುಡ ಸಮೇತ ತೆಗೆದು ಹಾಕಬೇಕೆಂದು ಮನವ ಹಕ್ಕುಗಳ ಅಯೋಗದ ಅಧ್ಯಕ್ಷರಾದ ಶ್ಯಾಂಭಟ್ ಹೇಳಿದರು.

ಇಂದು ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ಬಹಿಷ್ಕಾರ ಘಟನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಕಂಡುಬಂದಲ್ಲಿ ಅವುಗಳನ್ನು ಪತ್ರಿಕೆಗಳು, ಸುದ್ದಿ ವಾಹಿನಿಗಳಲ್ಲಿ ಹೆಚ್ಚಾಗಿ ಪ್ರಕಟಿಸುವ ಮೂಲಕ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇದರ ವಿದುದ್ದ ತೆಗೆದುಕೊಂಡಂತಹ ಕ್ರಮಗಳ ಬಗ್ಗೆ ಹೆಚ್ಚು ಪ್ರಕಟಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಾಮಾಜಿಕ ಬಹಿಷ್ಕಾರ ಎಂಬ ಪಿಡುಗು ತೊಲಗಬೇಕು ಇದನ್ನು ಬುಡ ಸಮೇತ ಕೀಳಲು ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಮುಖ್ಯವಾಗಿ ತಹಸಿಲ್ದಾರ್ ಸಿಡಿಪಿಓ ಮತ್ತು ಪೊಲೀಸ್ ಇಲಾಖೆಯವರು ಇದರ ಬಗ್ಗೆ ಹೆಚ್ಚಾಗಿ ಗಮನ ವಹಿಸಬೇಕು. ಇಂತಹ ಘಟನೆ ಸಂಭವಿಸಿದಲ್ಲಿ ಕೂಡಲೇ ಕ್ರಮ ವಹಿಸಿ ನಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

ಸಾಮಾಜಿಕ ಬಹಿಷ್ಕಾರದ ದೂರಿನ ಹಿನ್ನೆಲೆ ಕಂದೇಗಾಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದವರು. ಗ್ರಾಮದಲ್ಲಿ ಬಹಿಷ್ಕಾರವನ್ನು ಹಾಕಿರುವಂತಹ ವಾತಾವರಣ ಕಾಣುತಿಲ್ಲ ಒಂದು ವೇಳೆ ಅಂತಹ ಬೆಳವಣಿಗೆಗಳಾದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ವೆಂಟಿಗೋಡಿ, ನಂಜನಗೂಡು ಉಪ ವಿಭಾಗೀಯ ಡಿ ವೈ ಎಸ್ ಪಿ ರಘು, ತಾಲೂಕು ದಂಡಾಧಿಕಾರಿ ಶಿವಕುಮಾರ್, ಕಾಸನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್, ನಗರಸಭೆ ಆಯುಕ್ತ ನಂಜುಂಡಸ್ವಾಮಿ, ಸಿಡಿಪಿಓಗಳಾದ ಭವ್ಯಶ್ರೀ ಮತ್ತು ಮಂಜುಳಾ ‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago