ಮೈಸೂರು: ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ ಬುಡ ಸಮೇತ ತೆಗೆದು ಹಾಕಬೇಕೆಂದು ಮನವ ಹಕ್ಕುಗಳ ಅಯೋಗದ ಅಧ್ಯಕ್ಷರಾದ ಶ್ಯಾಂಭಟ್ ಹೇಳಿದರು.
ಇಂದು ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ಬಹಿಷ್ಕಾರ ಘಟನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಕಂಡುಬಂದಲ್ಲಿ ಅವುಗಳನ್ನು ಪತ್ರಿಕೆಗಳು, ಸುದ್ದಿ ವಾಹಿನಿಗಳಲ್ಲಿ ಹೆಚ್ಚಾಗಿ ಪ್ರಕಟಿಸುವ ಮೂಲಕ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇದರ ವಿದುದ್ದ ತೆಗೆದುಕೊಂಡಂತಹ ಕ್ರಮಗಳ ಬಗ್ಗೆ ಹೆಚ್ಚು ಪ್ರಕಟಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಸಾಮಾಜಿಕ ಬಹಿಷ್ಕಾರ ಎಂಬ ಪಿಡುಗು ತೊಲಗಬೇಕು ಇದನ್ನು ಬುಡ ಸಮೇತ ಕೀಳಲು ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಮುಖ್ಯವಾಗಿ ತಹಸಿಲ್ದಾರ್ ಸಿಡಿಪಿಓ ಮತ್ತು ಪೊಲೀಸ್ ಇಲಾಖೆಯವರು ಇದರ ಬಗ್ಗೆ ಹೆಚ್ಚಾಗಿ ಗಮನ ವಹಿಸಬೇಕು. ಇಂತಹ ಘಟನೆ ಸಂಭವಿಸಿದಲ್ಲಿ ಕೂಡಲೇ ಕ್ರಮ ವಹಿಸಿ ನಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.
ಸಾಮಾಜಿಕ ಬಹಿಷ್ಕಾರದ ದೂರಿನ ಹಿನ್ನೆಲೆ ಕಂದೇಗಾಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದವರು. ಗ್ರಾಮದಲ್ಲಿ ಬಹಿಷ್ಕಾರವನ್ನು ಹಾಕಿರುವಂತಹ ವಾತಾವರಣ ಕಾಣುತಿಲ್ಲ ಒಂದು ವೇಳೆ ಅಂತಹ ಬೆಳವಣಿಗೆಗಳಾದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ವೆಂಟಿಗೋಡಿ, ನಂಜನಗೂಡು ಉಪ ವಿಭಾಗೀಯ ಡಿ ವೈ ಎಸ್ ಪಿ ರಘು, ತಾಲೂಕು ದಂಡಾಧಿಕಾರಿ ಶಿವಕುಮಾರ್, ಕಾಸನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್, ನಗರಸಭೆ ಆಯುಕ್ತ ನಂಜುಂಡಸ್ವಾಮಿ, ಸಿಡಿಪಿಓಗಳಾದ ಭವ್ಯಶ್ರೀ ಮತ್ತು ಮಂಜುಳಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…