ತಿ.ನರಸೀಪುರ: ತಾಲ್ಲೂಕಿನ ಮುತ್ತತ್ತಿ ಗ್ರಾಮದ ಇನ್ನಾಯತ್ ಹುಸೇನ್ ಎಂಬವರ ಮಾವಿನ ತೋಟದಲ್ಲಿ ಹಲವು ದಿನಗಳ ಹಿಂದೆ ಇಟ್ಟಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ವರ್ಷದ ಗಂಡು ಚಿರತೆ ಸೆರೆಯಾಗಿದೆ,
ಮುತ್ತತ್ತಿ ಗ್ರಾಮದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗ್ರಾಮಸ್ಥರ ದೂರಿನ ಅನ್ವಯ ಇನ್ನಾಯತ್ ಹುಸೇನ್ ಎಂಬುವರ ತೋಟದಲ್ಲಿ ಬೋನು ಇರಿಸಲಾಗಿತ್ತು. ಗುರುವಾರ ರಾತ್ರಿ ಈ ಗಂಡು ಚಿರತೆ ಬೋನಿನಲ್ಲಿ ಬಿದ್ದಿದೆ. ಹುಸೇನ್ ತೋಟದ ಪಕ್ಕದ ಜಮೀನಿನ ಮಾಲೀಕ ದಿಲೀಪ್ ಎಂಬುವರು ಬೆಳಿಗ್ಗೆ ಜಮೀನಿಗೆ ಬಂದಾಗ ಬೋನಿಗೆ ಚಿರತೆ ಬಿದ್ದಿರುವುದನ್ನು ಗಮನಿಸಿ ಅರಣ್ಯ ಇಲಾಖೆಯವರಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ,
ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ, ಚಿರತೆಯನ್ನು ತಮ್ಮ ವಶಕ್ಕೆ ಪಡೆದು, ಪಟ್ಟಣದ ವಲಯ ಅರಣ್ಯ ಅಧಿಕಾರಿಗಳ ಕಚೇರಿಗೆ ತಂದಿದ್ದು, ಮೈಸೂರಿನ ಪಶು ವೈದ್ಯರಿಂದ ತಪಾಸಣೆ ನಡೆಸಿ, ಅರಣ್ಯ ಇಲಾಖೆಯ ಮೇಲಧಿಕಾರಿಗಳ ಆದೇಶದ ಮೇರೆಗೆ ಅರಣ್ಯಕ್ಕೆ ಬಿಡಲಾಗುವುದು ಎಂದು ಉಪ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ಇಲ್ಲಿಯವರೆಗೂ ಒಟ್ಟು ಏಳು ಚಿರತೆಗಳನ್ನು ಆಗಿದೆ, ದಿಲೀಪ್ ಎಂಬುವರ ತೋಟದಲ್ಲಿ ಐದು ವಿರತೆಗಳನ್ನು ಸೆಡೆ ಹಿಡಿಯಲಾಗಿದ್ದು, ಹಾಗೂ ಇನ್ನಾಯತ್ ಹುಸೇನ್ ಎಂಬುದು ತೋಟದಲ್ಲಿ ಜುಲೈ 11ರಂದು ಎರಡು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿತ್ತು, ಇಂದು ಎರಡು ವರ್ಷದ ಗಂಡು ಚಿರತೆ ಬನಿಗೆ ಬೀಳುವ ಮೂಲಕ ಇವರ ತೋಟದಲ್ಲಿ ಎರಡು ಚಿರುತೆಗಳು ಸರಿಯಾಗಿವೆ ಎಂದು ತಿಳಿದು ಬಂದಿದೆ.
ಮತ್ತೆ ಈ ಸ್ಥಳದಲ್ಲಿ ಬೋನನ್ನು ಇಡಲಾಗಿದೆ, ಮುತ್ತುತ್ತಿಯ ಗ್ರಾಮಸ್ಥರು ಕತ್ತಲಾದ ಮೇಲೆ ಜಮೀನ ಬಳಿ ತಿರುಳಲು ಭಯಭೀತರಾಗಿದ್ದಾರೆ,
ಸ್ಥಳಕ್ಕೆ ಉಪ ವಲಯ ಅರಣ್ಯ ಅಧಿಕಾರಿಗಳಾದ ಉಮೇಶ್, ನಾಗರಾಜು, ಅರಣ್ಯ ಇಲಾಖೆಯ ನಾಗರಾಜು, ಲೋಕೇಶ್ ಹಾಗೂ ಸಿಬ್ಬಂದಿ ವರ್ಗದವರು ಭೇಟಿ ನೀಡಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…