ಮೈಸೂರು

ಟಿ.ನರಸೀಪುರ| ಅಪಘಾತದ ವೇಳೆ ನದಿಗೆ ಬಿದ್ದಿದ್ದ ತಾಯಿಯ ಮೃತದೇಹ ಪತ್ತೆ

ಟಿ.ನರಸೀಪುರ: ಬೈಕ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ನದಿಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀವ್ರ ಶೋಧ ಕಾರ್ಯಾಚರಣೆ ಬಳಿಕ ತಾಯಿಯ ಮೃತದೇಹ ಪತ್ತೆಯಾಗಿದೆ.

ಬನ್ನೂರು ಮುಖ್ಯ ರಸ್ತೆಯಲ್ಲಿರುವ ಕಾವೇರಿ ನದಿಯ ಸೇತುವೆಯ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಆತನ ತಾಯಿ ಪಾರ್ವತಿ ದೇಹ ಕಾವೇರಿ ನದಿಗೆ ಬಿದ್ದಿದ್ದ ಘಟನೆ ನಿನ್ನೆ ನಡೆದಿತ್ತು.

ಪ್ರಕರಣ ಸಂಬಂಧ ಸತತ 15 ಗಂಟೆಗಳ ಕಾಲ ಮೃತ ದೇಹ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕೊನೆಗೂ ಶವ ಹೊರ ತೆಗೆಯುವಲ್ಲಿ ಯಶಸ್ವಿಯಾದರು.

ಮೃತರು ಮೈಸೂರಿನ ಮೇಟಗಳ್ಳಿಯ ಕರಕುಶಲ ನಗರದ ನಿವಾಸಿಗಳೆಂದು ತಿಳಿದು ಬಂದಿದೆ. ತಾಯಿ ಮಗ ಒಂದೇ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿಯಾಗಿ ಅವಘಡ ಸಂಭಸಿತ್ತು.

ಅಪಘಾತದಲ್ಲಿ ಬೈಕ್ ಸವಾರ ಶಂಕರ್(21) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದ. ಆತನ ತಾಯಿ ಪಾರ್ವತಿ ದೇಹ ನದಿಗೆ ಬಿದ್ದಿತ್ತು. ನಿನ್ನೆ ಕತ್ತಲಾದ ಕಾರಣ ಶವ ಹೊರ ತೆಗೆಯಲು ಸಾಧ್ಯವಾಗಿರಲಿಲ್ಲ. ಇಂದು ಮೃತ ಪಾರ್ವತಿ ಶವಕ್ಕಾಗಿ ಶೋಧ ಕಾರ್ಯ ನಡೆಸಿ ಶವ ಹೊರ ತೆಗೆಯುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿ:-ಬೆಳಗಾವಿ। ನಿಲ್ದಾಣದ ಬಳಿಯೇ ಹಳಿ ತಪ್ಪಿದ ಗೂಡ್ಸ್‌ ರೈಲು: ತಪ್ಪಿದ ಭಾರೀ ಅನಾಹುತ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago