ಟಿ.ನರಸೀಪುರ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ನದಿಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀವ್ರ ಶೋಧ ಕಾರ್ಯಾಚರಣೆ ಬಳಿಕ ತಾಯಿಯ ಮೃತದೇಹ ಪತ್ತೆಯಾಗಿದೆ.
ಬನ್ನೂರು ಮುಖ್ಯ ರಸ್ತೆಯಲ್ಲಿರುವ ಕಾವೇರಿ ನದಿಯ ಸೇತುವೆಯ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಆತನ ತಾಯಿ ಪಾರ್ವತಿ ದೇಹ ಕಾವೇರಿ ನದಿಗೆ ಬಿದ್ದಿದ್ದ ಘಟನೆ ನಿನ್ನೆ ನಡೆದಿತ್ತು.
ಪ್ರಕರಣ ಸಂಬಂಧ ಸತತ 15 ಗಂಟೆಗಳ ಕಾಲ ಮೃತ ದೇಹ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕೊನೆಗೂ ಶವ ಹೊರ ತೆಗೆಯುವಲ್ಲಿ ಯಶಸ್ವಿಯಾದರು.
ಮೃತರು ಮೈಸೂರಿನ ಮೇಟಗಳ್ಳಿಯ ಕರಕುಶಲ ನಗರದ ನಿವಾಸಿಗಳೆಂದು ತಿಳಿದು ಬಂದಿದೆ. ತಾಯಿ ಮಗ ಒಂದೇ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿಯಾಗಿ ಅವಘಡ ಸಂಭಸಿತ್ತು.
ಅಪಘಾತದಲ್ಲಿ ಬೈಕ್ ಸವಾರ ಶಂಕರ್(21) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದ. ಆತನ ತಾಯಿ ಪಾರ್ವತಿ ದೇಹ ನದಿಗೆ ಬಿದ್ದಿತ್ತು. ನಿನ್ನೆ ಕತ್ತಲಾದ ಕಾರಣ ಶವ ಹೊರ ತೆಗೆಯಲು ಸಾಧ್ಯವಾಗಿರಲಿಲ್ಲ. ಇಂದು ಮೃತ ಪಾರ್ವತಿ ಶವಕ್ಕಾಗಿ ಶೋಧ ಕಾರ್ಯ ನಡೆಸಿ ಶವ ಹೊರ ತೆಗೆಯುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿ:-ಬೆಳಗಾವಿ। ನಿಲ್ದಾಣದ ಬಳಿಯೇ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…