ಟಿ.ನರಸೀಪುರ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ನದಿಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀವ್ರ ಶೋಧ ಕಾರ್ಯಾಚರಣೆ ಬಳಿಕ ತಾಯಿಯ ಮೃತದೇಹ ಪತ್ತೆಯಾಗಿದೆ.
ಬನ್ನೂರು ಮುಖ್ಯ ರಸ್ತೆಯಲ್ಲಿರುವ ಕಾವೇರಿ ನದಿಯ ಸೇತುವೆಯ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಆತನ ತಾಯಿ ಪಾರ್ವತಿ ದೇಹ ಕಾವೇರಿ ನದಿಗೆ ಬಿದ್ದಿದ್ದ ಘಟನೆ ನಿನ್ನೆ ನಡೆದಿತ್ತು.
ಪ್ರಕರಣ ಸಂಬಂಧ ಸತತ 15 ಗಂಟೆಗಳ ಕಾಲ ಮೃತ ದೇಹ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕೊನೆಗೂ ಶವ ಹೊರ ತೆಗೆಯುವಲ್ಲಿ ಯಶಸ್ವಿಯಾದರು.
ಮೃತರು ಮೈಸೂರಿನ ಮೇಟಗಳ್ಳಿಯ ಕರಕುಶಲ ನಗರದ ನಿವಾಸಿಗಳೆಂದು ತಿಳಿದು ಬಂದಿದೆ. ತಾಯಿ ಮಗ ಒಂದೇ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿಯಾಗಿ ಅವಘಡ ಸಂಭಸಿತ್ತು.
ಅಪಘಾತದಲ್ಲಿ ಬೈಕ್ ಸವಾರ ಶಂಕರ್(21) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದ. ಆತನ ತಾಯಿ ಪಾರ್ವತಿ ದೇಹ ನದಿಗೆ ಬಿದ್ದಿತ್ತು. ನಿನ್ನೆ ಕತ್ತಲಾದ ಕಾರಣ ಶವ ಹೊರ ತೆಗೆಯಲು ಸಾಧ್ಯವಾಗಿರಲಿಲ್ಲ. ಇಂದು ಮೃತ ಪಾರ್ವತಿ ಶವಕ್ಕಾಗಿ ಶೋಧ ಕಾರ್ಯ ನಡೆಸಿ ಶವ ಹೊರ ತೆಗೆಯುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿ:-ಬೆಳಗಾವಿ। ನಿಲ್ದಾಣದ ಬಳಿಯೇ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…