ಮೈಸೂರು : ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು.
ಕುಂಭಮೇಳದ ಎರಡನೇ ದಿನವಾದ ಮಂಗಳವಾರ, ಅಗಸ್ತ್ಯೇಶ್ವರ ಸ್ವಾಮಿ ದೇಗುಲದ ಸ್ನಾನಘಟ್ಟದಲ್ಲಿ ಗಂಗೆಯನ್ನು ನಮಿಸಿದ ಅರ್ಚಕರು ಬೆಳಗಿದ ದೀಪಗಳು ಕಾವೇರಿ, ಕಪಿಲೆ, ಸ್ಪಟಿಕ ನದಿಗಳ ಸಂಗಮದಲ್ಲಿ ಹೊಳೆದವು.
ಜೀವನದಿಗಳಾದ ‘ಕಾವೇರಿ’, ‘ಕಪಿಲೆ’ಗೆ ಜಯಕಾರ ಹಾಕಿದರು. ಸ್ವರ್ಗಸದೃಶ ವಾತಾವರಣ ನೋಡಿದವರ ಎದೆಯಲ್ಲಿ ಭಕ್ತಿರಸವು ಹರಿಯಿತು.
ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, , ಸೋಮೇಶ್ವರನಾಥ ಸ್ವಾಮೀಜಿ, ತಿರುಚ್ಚಿ ಸಂಸ್ಥಾನ ಮಠದ ಜಯೇಂದ್ರಪುರಿ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳನ್ನು ಮೆರವಣಿಗೆಯಲ್ಲಿ ಮಂಗಳವಾದ್ಯಗಳಲ್ಲಿ ಕರೆತರಲಾಯಿತು.
ನಂತರ ರಾತ್ರಿ 8 ಗಂಟೆಗೆ ಕಾವೇರಿ ಆರತಿ ಓಂಕಾರದ ಮೂಲಕದ ಚಾಲನೆ ದೊರಕಿತು. ದೂಪಾರತಿಯನ್ನು ಮಾಡಿದ ಅರ್ಚಕರ ತಂಡವು, ಗಂಟೆಗಳ ನಾದವನ್ನು ಹೊಮ್ಮಿಸಿತು. ಚಾಮರಗಳನ್ನು ಬೀಸಿದರು.
ಶಿವಸ್ತುತಿಯು ಮೊಳಗುತ್ತಿದ್ದಂತೆ ದೀಪಗಳನ್ನು ಒಂಭತ್ತು ಅರ್ಚಕರು ಹೊತ್ತಿಸಿದರು. ಕಾವೇರಿ ಮಾತೆಗೆ ಮೂರು ಸುತ್ತು ಬೆಳಗಿ, ಆಗಸಕ್ಕೆ ತೋರಿದರು. ನೋಡುತ್ತಿದ್ದ ಭಕ್ತರು, ಕೈ ಮುಗಿದರು. ‘ಕಾಲಭೈರವ’, ‘ರುದ್ರ’ ಶ್ಲೋಕಗಳ ಗೀತೆಗಳ ಹಿಮ್ಮೇಳವು ಭಾವ ತೀವ್ರತೆಯನ್ನು ಹೆಚ್ಚಿಸಿತು.
ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಪಾಲ್ಗೊಂಡಿದ್ದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…