ಮೈಸೂರು

ನಿಗಧಿತ ಸಮಯದಲ್ಲಿ ಪ್ರಗತಿಯನ್ನು ಸಾಧಿಸಿ : ಸಿಇಓ ಎಸ್. ಯುಕೇಶ್ ಕುಮಾರ್

ಮೈಸೂರು : ತಿ.ನರಸೀಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಿ ಎಲ್ಲಾ ಯೋಜನೆಗಳಲ್ಲಿ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮನರೇಗಾ ಯೋಜನೆಯಡಿ ಅನುಷ್ಠಾನ ಇಲಾಖೆಗಳಿಗೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಗುರಿಯನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸಿ ಹೆಚ್ಚು ಪ್ರಗತಿಯನ್ನು ಸಾಧಿಸಬೇಕೆಂದು ತಿಳಿಸಿದರು. ಮಾನವ ದಿನಗಳನ್ನು ಸೃಜಿಸದೆ ಇರುವ ಗ್ರಾಮ ಪಂಚಾಯಿತಿಗಳು ಕಡ್ಡಾಯವಾಗಿ NMR ಗಳನ್ನು ತೆಗೆದು ಶೀಘ್ರದಲ್ಲಿ ಮಾನವ ದಿನಗಳನ್ನು ಸೃಜಿಸಬೇಕೆಂದು ಸೂಚನೆ ನೀಡಿದರು.

ಅಪೂರ್ಣಗೊಂಡಿರುವ JJM ಯೋಜನೆಯ ಮೊದಲ ಹಂತದ ನಳ ಸಂಪರ್ಕಗಳ ಕಾಮಗಾರಿಗಳು,ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮೇಜರ್ ಟ್ಯಾಂಕ್ ಗಳನ್ನು ನಿರ್ಮಾಣ ಮಾಡುವ ಸಲುವಾಗಿ ಸರ್ಕಾರಿ ಸ್ಥಳವನ್ನು ಪಿಡಿಒಗಳು ಗುರುತಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ನೀಡಬೇಕು ಹಾಗೂ ಮೇಜರ್ ಟ್ಯಾಂಕ್ ಗಳ ದುರಸ್ಥಿ ಕಾರ್ಯಗಳನ್ನು ಕಾಲಕಾಲಕ್ಕೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಗ್ರಾಮ ಪಂಚಾಯಿತಿಗೆ ಶೀಘ್ರವೇ ಹಸ್ತಾಂತರಿಸಬೇಕು ಎಂದರು.

ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಶೀಘ್ರದಲ್ಲೇ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು PRED ಇಲಾಖೆಯ AEE ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ AEE ರವರಿಗೆ ಸೂಚನೆ ನೀಡಿದರು. ಗ್ರಾಮಗಳಲ್ಲಿನ ಕೆರೆಗಳಲ್ಲಿ ಮೀನು ಸಾಕಣೆ ಮಾಡುವ ಕುರಿತು ಹರಾಜು ಪ್ರಕ್ರಿಯೆಯನ್ನು ಜೂನ್ ತಿಂಗಳ ಒಳಗಾಗಿ ನಡೆಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.

ಕೂಸಿನ ಮನೆ, ಸ್ವಚ್ಛ ಭಾರತ್ ಮಿಷನ್ ಅಡಿಯ IHHL, ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆ, ಕಸ ಸಂಗ್ರಹಣೆ, ಬೂದು ನೀರು ನಿರ್ವಹಣೆ ಕಾಮಗಾರಿಗಳು, ವಸತಿ ಯೋಜನೆಯಡಿಯ ಮನೆಗಳ ಪ್ರಗತಿ, ಕರ ವಸೂಲಾತಿ, ಸಕಾಲ, ಮಹಿಳಾ ಗ್ರಾಮ ಸಭೆ ಹಾಗೂ ಇತರೆ ಯೋಜನೆಗಳ ಪ್ರಗತಿಯನ್ನು ಸಾಧಿಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಈ ವೇಳೆ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಅನಂತರಾಜು. ಪಿ. ಎಸ್, ಸಹಾಯಕ ನಿರ್ದೇಶಕರು (ಗ್ರಾ. ಉ), ತಾಲ್ಲೂಕು ಯೋಜನಾಧಿಕಾರಿ ಡಾ. ಕೆ. ರಂಗಸ್ವಾಮಿ, PRED AEE, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ AEE, RFO, ಸಿಡಿಪಿಓ, ಬಿಇಓ, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪಿಡಿಒಗಳು, ತಾ.ಪಂ. ಯ ತಾಂತ್ರಿಕ ಸಿಬಂದಿಗಳು, ತಾಲ್ಲೂಕು ಐ ಇ ಸಿ ಸಂಯೋಜಕರು, ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago