ಮೈಸೂರು

ಟಿ.ನರಸೀಪುರ| ಆಸ್ತಿಗಾಗಿ ಸಹೋದರಿಯರಿಂದ ಕಿರುಕುಳ: ಸಹೋದರ ಆತ್ಮಹತ್ಯೆ

ಟಿ.ನರಸೀಪುರ: ಆಸ್ತಿಗಾಗಿ ಸಹೋದರಿಯರು ಕಿರುಕುಳ ನೀಡಿದ ಪರಿಣಾಮ ಸಹೋದರ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ.

55 ವರ್ಷದ ಲಕ್ಷ್ಮೀಕಾಂತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆಸ್ತಿಯಲ್ಲಿ ಪಾಲು ಬೇಕೆಂದು ಸಹೋದರಿಯರು ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಬೇಸತ್ತ ಲಕ್ಷ್ಮೀಕಾಂತ್‌ ಅವರು, ನನ್ನ ಸಾವಿಗೆ ಸಹೋದರಿಯರಾದ ದ್ರಾಕ್ಷಾಯಿಣಿ, ನಳಿನಿ, ಭಾವಂದಿರಾದ ದಾಸೇಗೌಡ, ನಾರಾಯಣಗೌಡ ಕಾರಣವೆಂದು ವಿಡಿಯೋ ಮಾಡಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ:-ಓದುಗರ ಪತ್ರ:  ಪೊಲೀಸರಿಗೆ ಹೊಸ ಮಾದರಿಯ ಟೋಪಿ

ಮೈಸೂರಿನಲ್ಲಿ ನೆಲೆಸಿದ್ದ ಲಕ್ಷ್ಮೀಕಾಂತ್‌ ಕುಟುಂಬ ಸಹೋದರಿಯರ ಕಿರುಕುಳದಿಂದ ಬೇಸತ್ತು ತಲಕಾಡಿನ ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ತಲಕಾಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

8 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

9 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

9 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

9 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

10 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

10 hours ago