ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ 2025ರ ಕುಂಭಮೇಳ ನಡೆಯಲಿದೆ. ಹೀಗಾಗಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ತಿಳಿಸಿದರು
ಕುಂಭ ಮೇಳ -2025 ರ ಆಚರಣೆಯ ಸಂಬಂಧ ಭಾನುವಾರ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫೆಬ್ರವರಿ 10 ರಿಂದ 12 ಈವರೆಗೆ ಟಿ.ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ. ಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆಬ್ರವರಿ 11 ರಂದು ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಚತೆ ಕಾಪಾಡಬೇಕು ಎಂದು ಸೂಚನೆ ನೀಡಿದರು.
ಫೈರ್ ಸೆಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನದಿಯಲ್ಲಿ ಸ್ಥಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…