ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ 2025ರ ಕುಂಭಮೇಳ ನಡೆಯಲಿದೆ. ಹೀಗಾಗಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ತಿಳಿಸಿದರು
ಕುಂಭ ಮೇಳ -2025 ರ ಆಚರಣೆಯ ಸಂಬಂಧ ಭಾನುವಾರ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫೆಬ್ರವರಿ 10 ರಿಂದ 12 ಈವರೆಗೆ ಟಿ.ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ. ಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆಬ್ರವರಿ 11 ರಂದು ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಚತೆ ಕಾಪಾಡಬೇಕು ಎಂದು ಸೂಚನೆ ನೀಡಿದರು.
ಫೈರ್ ಸೆಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನದಿಯಲ್ಲಿ ಸ್ಥಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…