ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.
ಶಿವಣ್ಣ (50), ನಾಗರತ್ನ (45) ಹಾಗೂ ರಕ್ಷಿತಾ (21) ಎಂಬುವವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ.
ಅದೇ ಗ್ರಾಮದ ಉಲ್ಲಾಸ್ ಗೌಡ ಎಂಬಾತ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು, ಮಾನಸಿಕ ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಕ್ಷಿತಾಗೆ ಮದುವೆ ನಿಶ್ಚಿಯವಾಗಿತ್ತು. ಉಲ್ಲಾಸ್ ಗೌಡನಿಗೆ ರಕ್ಷಿತಾ ಕಳುಹಿಸಿದ ಮೆಸೇಜ್ ಹಾಗೂ ಕೆಲವು ಫೋಟೋಗಳನ್ನು ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಮದುವೆ ನಿಶ್ಚಿಯವಾಗಿದ್ದ ಯುವಕನಿಗೂ ಉಲ್ಲಾಸ್ ಗೌಡ ಮೆಸೇಜ್ ಹಾಗೂ ಫೋಟೋಗಳನ್ನು ಕಳುಹಿಸಿದ್ದ ಎನ್ನಲಾಗಿದೆ. ಈ ಬೆಳವಣಿಗೆಯಿಂದ ಬೇಸತ್ತು ಗ್ರಾಮದ ತಮ್ಮ ಮನೆಯಲ್ಲೇ ವಿಷ ಸೇವಿಸಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂವರ ಸಾವಿಗೂ ಉಲ್ಲಾಸ್ ಗೌಡನೇ ಕಾರಣನೆಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…