ಮೈಸೂರು

ತಿ.ನರಸೀಪುರ: ಪುರಸಭೆಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತುಂಬಲ ಪ್ರಕಾಶ್ ಆಯ್ಕೆ

ಮೈಸೂರು: ಪಟ್ಟಣ ಪುರಸಭೆಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 7ನೇ ವಾರ್ಡಿನ ಸದಸ್ಯ ತುಂಬಲ ಪ್ರಕಾಶ್ ರನ್ನು ಆಯ್ಕೆ ಮಾಡಲಾಗಿದೆ.

ಪಟ್ಟಣ ಪುರಸಭೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ವೇಳೆ ಪ್ರಕಾಶ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮೊದಲಿಗೆ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಿ ನಂತರ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಿತು.

ಸ್ಥಾಯಿ ಸಮಿತಿ ಸದಸ್ಯರನ್ನಾಗಿ ಮಾಜಿ ಅಧ್ಯಕ್ಷ ಎಸ್.ಮದನ ರಾಜ್, ಟಿ.ಎಂ.ನಂಜುಂಡಸ್ವಾಮಿ, ಎನ್.ಸೋಮು, ಶೋಭಾರಾಣಿ, ಪ್ರೇಮ ಹಾಗು ರೂಪಶ್ರಿ ಯವರನ್ನು ಆಯ್ಕೆ ಮಾಡಿ ನಂತರ ಅಧ್ಯಕ್ಷರ ಆಯ್ಕೆಗೆ ಅವಕಾಶ ಮಾಡಿಕೊಡಲಾಯಿತು.

ಪ್ರಕಾಶ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಹಲವಾರು ಮುಖಂಡರು ಪುರಸಭೆಗೆ ಆಗಮಿಸಿ ಅಧ್ಯಕ್ಷರನ್ನು‌ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ತುಂಬಲ ಪ್ರಕಾಶ್ ಪುರಸಭೆಯಲ್ಲಿ ಖಾಲಿ ಉಳಿದಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮಹದೇವಪ್ಪರನ್ನು ಕೇಳಿಕೊಂಡ ಹಿನ್ನೆಲೆಯಲ್ಲಿ ಇಂದು ಸ್ಥಾಯಿ ಸಮಿತಿಗೆ ಅಧ್ಯಕ್ಷ ಮತ್ತು ಸದಸ್ಯರ ಆಯ್ಕೆಗೆ ಅವಕಾಶ ಮಾಡಲಾಗಿದೆ.

ನನಗೆ ದೊರಕಿರುವ ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ಸ್ಥಾಯಿ ಸಮಿತಿ ವ್ಯಾಪ್ತಿಗೆ ಬರುವ ಉಳಿಕೆ ಕೆಲಸಗಳಿಗೆ ಆದ್ಯತೆ ಮೇರೆಗೆ ಕೆಲಸ ಮಾಡಿ ಅಧ್ಯಕ್ಷ ಸ್ಥಾನಕ್ಕೆ ಗೌರವ ತಂದು ಕೊಡುವ ಕೆಲಸ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಪುರಸಭೆ ಅಧ್ಯಕ್ಷೆ ವಸಂತ ಬಿ.ಶ್ರೀಕಂಠ, ಉಪಾಧ್ಯಕ್ಷೆ ರಾಜೇಶ್ವರಿ ಎಂ. ರಾಘವೇಂದ್ರ, ಮಾಜಿ ಅಧ್ಯಕ್ಷರಾದ ಟಿ.ಎಂ.ನಂಜುಂಡಸ್ವಾಮಿ, ಎಸ್.ಮದನ್ ರಾಜ್, ಎನ್.ಸೋಮು, ತಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಸದಸ್ಯರಾದ ಅರ್ಜುನ್ ರಮೇಶ್, ಸೇರಿದಂತೆ ಮತ್ತಿತರರಿದ್ದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

9 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago