Take steps for speedy implementation of Kusum-C scheme Gaurav Gupta
ಮೈಸೂರು : ನೀರಾವರಿ ಪಂಪ್ಸೆಟ್ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕುಸುಮ್-ಸಿ ಯೋಜನೆಯನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದ ರಾಜ್ಯದ ನಂಬರ್ 1 ಎಸ್ಕಾಂ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಗಮಿತ(ಸೆಸ್ಕ್) ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಸೂಚನೆ ನೀಡಿದರು.
ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ನಿಗಮ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ರೈತರ ಕೃಷಿ ಪಂಪ್ ಸೆಟ್ಗಳಿಗೆ ಹಗಲಿನ ವೇಳೆಯಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕುಸುಮ್-ಸಿ ಯೋಜನೆ ಅತ್ಯಂತ ಸಹಕಾರಿಯಾಗಲಿದೆ. ಆದ್ದರಿಂದ ಕುಸುಮ್-ಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರೆ ಮುಂದಿನ ಕೆಲವೇ ತಿಂಗಳುಗಳಲ್ಲಿ ರೈತರ ವಿದ್ಯುತ್ ಸಮಸ್ಯೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ನಿಗಮದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು” ಎಂದರು.
“ಕುಸುಮ್-ಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವ ರಾಜ್ಯದ ನಂಬರ್ 1 ಎಸ್ಕಾಂ ಎಂಬ ಖ್ಯಾತಿ ಪಡೆಯುವಂತೆ ಮಾಡಲು ಅಧಿಕಾರಿಗಳು ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡಬೇಕಿದೆ. ಸೆಸ್ಕ್ ವ್ಯಾಪ್ತಿಯಲ್ಲಿ ಈಗಾಗಲೇ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿವಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಜತೆಗೆ ಎಲ್ಲೆಲ್ಲಿ ಭೂಮಿ ಸಮಸ್ಯೆಗಳಿವೆ ಅವುಗಳನ್ನು ಬಗೆಹರಿಸಬೇಕಿದ್ದು, ಈ ನಿಟ್ಟಿನಲ್ಲಿ ಉದ್ಯಮಿಗಳು ಹಾಗೂ ರೈತರ ಜತೆಗೆ ಮಾತುಕತೆ ನಡೆಸಿ ಕುಸುಮ್-ಸಿ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಭೂಮಿಯನ್ನು ಪಡೆಯಲು ಪ್ರಯತ್ನಿಸಬೇಕು” ಎಂದು ಸೂಚಿಸಿದರು.
ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: “ನಿಗಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳು ಚುರುಕಾಗಿ ಕೆಲಸ ಮಾಡುವುದರ ಜತೆಗೆ ಸಮಸ್ಯೆಗಳು ಕಂಡುಬಂದಲ್ಲಿ ಶೀಘ್ರವೇ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಜನರ ಆಕ್ರೋಶಕ್ಕೆ ಗುರಿಯಾಗುತ್ತೇವೆ. ಹಾಗಾಗಿ, ಜವಾಬ್ದಾರಿ ಅರಿತು ಕೆಲಸ ಮಾಡಬೇಕು” ಎಂದು ನಿಗಮದ ಎಇಇಗಳಿಗೆ ಅಪರ ಮುಖ್ಯಕಾರ್ಯದರ್ಶಿಗಳು ಸೂಚನೆ ನೀಡಿದರು.
“ಬಿಲ್ಲಿಂಗ್, ಮೀಟರ್ ರೀಡಿಂಗ್, ಮೀಟರ್ಗಳ ಪರಿಶೀಲನೆ, ಅಕ್ರಮ ವಿದ್ಯುತ್ ಸಂಪರ್ಕಗಳು ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಆಗಬೇಕು. ಮುಖ್ಯವಾಗಿ, ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾವಹಿಸಬೇಕು.” ಎಂದು ಸಲಹೆ ನೀಡಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಗಂಗಾ ಕಲ್ಯಾಣ ಯೋಜನೆ, ಕುಡಿಯುವ ನೀರು ಸರಬರಾಜು ಯೋಜನೆ, ಪಿಎಂ ಜನಮನ್, ಹಾಡಿಗಳ ವಿದ್ಯುತೀಕರಣ ಯೋಜನೆಗಳ ಪ್ರಗತಿ ಹಾಗೂ ನಿಗಮ ವ್ಯಾಪ್ತಿಯಲ್ಲಿ ಮಾಡಲಾಗಿರುವ ಫೀಡರ್ ನಿರ್ವಹಣೆ, ಟ್ರಾನ್ಸ್ಫಾರ್ಮರ್ಗಳ ನಿರ್ವಹಣೆ, ಐಪಿ ಸೆಟ್ಗಳ ನೋಂದಣಿ ಇನ್ನಿತರ ವಿಷಯಗಳ ಮಾಹಿತಿ ನೀಡಿದರು.
ಸಭೆಯಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಶರಣಮ್ಮ ಎಸ್. ಜಂಗಿನ, ಆಡಳಿತ ಮತ್ತು ಮಾನವ ಸಂಪನ್ಮೂಲ ಶಾಖೆಯ ಪ್ರಧಾನ ವ್ಯವಸ್ಥಾಪಕರಾದ ಬಿ.ಆರ್. ರೂಪ ಸೇರಿದಂತೆ ಮುಖ್ಯ ಇಂಜಿನಿಯರ್ಗಳು, ನಿಗಮದ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…