Take steps for speedy implementation of Kusum-C scheme Gaurav Gupta
ಮೈಸೂರು : ನೀರಾವರಿ ಪಂಪ್ಸೆಟ್ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕುಸುಮ್-ಸಿ ಯೋಜನೆಯನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದ ರಾಜ್ಯದ ನಂಬರ್ 1 ಎಸ್ಕಾಂ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಗಮಿತ(ಸೆಸ್ಕ್) ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಸೂಚನೆ ನೀಡಿದರು.
ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ನಿಗಮ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ರೈತರ ಕೃಷಿ ಪಂಪ್ ಸೆಟ್ಗಳಿಗೆ ಹಗಲಿನ ವೇಳೆಯಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕುಸುಮ್-ಸಿ ಯೋಜನೆ ಅತ್ಯಂತ ಸಹಕಾರಿಯಾಗಲಿದೆ. ಆದ್ದರಿಂದ ಕುಸುಮ್-ಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರೆ ಮುಂದಿನ ಕೆಲವೇ ತಿಂಗಳುಗಳಲ್ಲಿ ರೈತರ ವಿದ್ಯುತ್ ಸಮಸ್ಯೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ನಿಗಮದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು” ಎಂದರು.
“ಕುಸುಮ್-ಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವ ರಾಜ್ಯದ ನಂಬರ್ 1 ಎಸ್ಕಾಂ ಎಂಬ ಖ್ಯಾತಿ ಪಡೆಯುವಂತೆ ಮಾಡಲು ಅಧಿಕಾರಿಗಳು ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡಬೇಕಿದೆ. ಸೆಸ್ಕ್ ವ್ಯಾಪ್ತಿಯಲ್ಲಿ ಈಗಾಗಲೇ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿವಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಜತೆಗೆ ಎಲ್ಲೆಲ್ಲಿ ಭೂಮಿ ಸಮಸ್ಯೆಗಳಿವೆ ಅವುಗಳನ್ನು ಬಗೆಹರಿಸಬೇಕಿದ್ದು, ಈ ನಿಟ್ಟಿನಲ್ಲಿ ಉದ್ಯಮಿಗಳು ಹಾಗೂ ರೈತರ ಜತೆಗೆ ಮಾತುಕತೆ ನಡೆಸಿ ಕುಸುಮ್-ಸಿ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಭೂಮಿಯನ್ನು ಪಡೆಯಲು ಪ್ರಯತ್ನಿಸಬೇಕು” ಎಂದು ಸೂಚಿಸಿದರು.
ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ: “ನಿಗಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳು ಚುರುಕಾಗಿ ಕೆಲಸ ಮಾಡುವುದರ ಜತೆಗೆ ಸಮಸ್ಯೆಗಳು ಕಂಡುಬಂದಲ್ಲಿ ಶೀಘ್ರವೇ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಜನರ ಆಕ್ರೋಶಕ್ಕೆ ಗುರಿಯಾಗುತ್ತೇವೆ. ಹಾಗಾಗಿ, ಜವಾಬ್ದಾರಿ ಅರಿತು ಕೆಲಸ ಮಾಡಬೇಕು” ಎಂದು ನಿಗಮದ ಎಇಇಗಳಿಗೆ ಅಪರ ಮುಖ್ಯಕಾರ್ಯದರ್ಶಿಗಳು ಸೂಚನೆ ನೀಡಿದರು.
“ಬಿಲ್ಲಿಂಗ್, ಮೀಟರ್ ರೀಡಿಂಗ್, ಮೀಟರ್ಗಳ ಪರಿಶೀಲನೆ, ಅಕ್ರಮ ವಿದ್ಯುತ್ ಸಂಪರ್ಕಗಳು ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಆಗಬೇಕು. ಮುಖ್ಯವಾಗಿ, ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾವಹಿಸಬೇಕು.” ಎಂದು ಸಲಹೆ ನೀಡಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಗಂಗಾ ಕಲ್ಯಾಣ ಯೋಜನೆ, ಕುಡಿಯುವ ನೀರು ಸರಬರಾಜು ಯೋಜನೆ, ಪಿಎಂ ಜನಮನ್, ಹಾಡಿಗಳ ವಿದ್ಯುತೀಕರಣ ಯೋಜನೆಗಳ ಪ್ರಗತಿ ಹಾಗೂ ನಿಗಮ ವ್ಯಾಪ್ತಿಯಲ್ಲಿ ಮಾಡಲಾಗಿರುವ ಫೀಡರ್ ನಿರ್ವಹಣೆ, ಟ್ರಾನ್ಸ್ಫಾರ್ಮರ್ಗಳ ನಿರ್ವಹಣೆ, ಐಪಿ ಸೆಟ್ಗಳ ನೋಂದಣಿ ಇನ್ನಿತರ ವಿಷಯಗಳ ಮಾಹಿತಿ ನೀಡಿದರು.
ಸಭೆಯಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಶರಣಮ್ಮ ಎಸ್. ಜಂಗಿನ, ಆಡಳಿತ ಮತ್ತು ಮಾನವ ಸಂಪನ್ಮೂಲ ಶಾಖೆಯ ಪ್ರಧಾನ ವ್ಯವಸ್ಥಾಪಕರಾದ ಬಿ.ಆರ್. ರೂಪ ಸೇರಿದಂತೆ ಮುಖ್ಯ ಇಂಜಿನಿಯರ್ಗಳು, ನಿಗಮದ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…