ತಲಕಾಡು (ತಿ.ನರಸೀಪುರ ತಾ.): ನದಿ ನೀರಿಗಿಳಿದು ಐವರು ಗೆಳೆಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಮೇದಿನಿ ಗ್ರಾಮದ ಶ್ರೀ ರಾಮ ಕಟ್ಟೆಯ ನದಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕೊಳ್ಳೇಗಾಲ ಮೂಲದ ಭರತ್ (17) ಮತ್ತು ಲಿಖಿತ್ (18) ಎಂಬ ವಿದ್ಯಾರ್ಥಿಗಳು ಮೃತಪಟ್ಟವರು. ಭರತ್, ಲಿಖಿತ್, ಅಕ್ಷಯ್, ಡ್ಯಾನಿಯಲ್, ಭಾರತ್ ಎಂಬ ಐವರು ಕೊಳ್ಳೇಗಾಲ ಪಟ್ಟಣದ ಮಾನಸ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದು, ಇತ್ತೀಚೆಗಷ್ಟೇ ಪರೀಕ್ಷೆ ಬರೆದಿದ್ದರು. ಶನಿವಾರ ಮಧ್ಯಾಹ್ನ ವಿಹಾರಾರ್ಥವಾಗಿ ಮೇದಿನಿ ಶ್ರೀರಾಮ ಅಣೆಕಟ್ಟೆಯ ಬಳಿಗೆ ತೆರಳಿದ್ದರು.
ಭರತ್ ಹಾಗೂ ಲಿಖಿತ್ ನದಿಗಿಳಿದು ನೀರಿನಲ್ಲಿ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ನೀರಿನ ಆಳಕ್ಕೆ ಜಾರಿದ್ದಾರೆ. ಇಬ್ಬರಿಗೂ ಈಜು ಬಾರದ್ದರಿಂದ ಅಪಾಯದಿಂದ ಪಾರಾಗಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಕಟ್ಟೆಯ ಗೇಟ್ ಒಳಗಡೆಯಿಂದ ಹೊರನದಿಗೆ ನೂಕಲ್ಪಟ್ಟಿರಬಹುದು ಎಂದು ಅಂದಾಜು ನಡೆಸಿದ ಪೊಲೀಸರು, ಗೇಟ್ ಬಳಿ ಸೇರಿದಂತೆ ಗೇಟ್ ಕೆಳಭಾಗದ ನದಿ ಉದ್ದಕ್ಕೂ ಶವಗಳ ಶೋಧನೆ ನಡೆಸಿದ್ದಾರೆ.
ಸ್ಥಳಕ್ಕೆ ತಲಕಾಡು ಠಾಣೆಯ ಪೊಲೀಸರು ಧಾವಿಸಿದ್ದು, ಶವದ ಶೋಧನೆಗೆ ನೆರವಾಗಿದ್ದಾರೆ. ಜಿಲ್ಲಾ ಅಡಿಷನಲ್ ಎಸ್ಪಿ ಮಲಿಕ್, ನಂಜನಗೂಡು ಡಿವೈಎಸ್ಪಿ ರಘು, ತಲಕಾಡು ಎಸ್ಐ ಆನಂದ್ ಕುಮಾರ್, ಎಸ್ಐ ಮಹದೇವು, ಎಎಸ್ಐ ನಾಗೇಂದ್ರ, ಸಿಬ್ಬಂದಿ ವರ್ಗ, ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹಗಳ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…