ತಲಕಾಡು (ತಿ.ನರಸೀಪುರ ತಾ.): ನದಿ ನೀರಿಗಿಳಿದು ಐವರು ಗೆಳೆಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಮೇದಿನಿ ಗ್ರಾಮದ ಶ್ರೀ ರಾಮ ಕಟ್ಟೆಯ ನದಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕೊಳ್ಳೇಗಾಲ ಮೂಲದ ಭರತ್ (17) ಮತ್ತು ಲಿಖಿತ್ (18) ಎಂಬ ವಿದ್ಯಾರ್ಥಿಗಳು ಮೃತಪಟ್ಟವರು. ಭರತ್, ಲಿಖಿತ್, ಅಕ್ಷಯ್, ಡ್ಯಾನಿಯಲ್, ಭಾರತ್ ಎಂಬ ಐವರು ಕೊಳ್ಳೇಗಾಲ ಪಟ್ಟಣದ ಮಾನಸ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದು, ಇತ್ತೀಚೆಗಷ್ಟೇ ಪರೀಕ್ಷೆ ಬರೆದಿದ್ದರು. ಶನಿವಾರ ಮಧ್ಯಾಹ್ನ ವಿಹಾರಾರ್ಥವಾಗಿ ಮೇದಿನಿ ಶ್ರೀರಾಮ ಅಣೆಕಟ್ಟೆಯ ಬಳಿಗೆ ತೆರಳಿದ್ದರು.
ಭರತ್ ಹಾಗೂ ಲಿಖಿತ್ ನದಿಗಿಳಿದು ನೀರಿನಲ್ಲಿ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ನೀರಿನ ಆಳಕ್ಕೆ ಜಾರಿದ್ದಾರೆ. ಇಬ್ಬರಿಗೂ ಈಜು ಬಾರದ್ದರಿಂದ ಅಪಾಯದಿಂದ ಪಾರಾಗಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಕಟ್ಟೆಯ ಗೇಟ್ ಒಳಗಡೆಯಿಂದ ಹೊರನದಿಗೆ ನೂಕಲ್ಪಟ್ಟಿರಬಹುದು ಎಂದು ಅಂದಾಜು ನಡೆಸಿದ ಪೊಲೀಸರು, ಗೇಟ್ ಬಳಿ ಸೇರಿದಂತೆ ಗೇಟ್ ಕೆಳಭಾಗದ ನದಿ ಉದ್ದಕ್ಕೂ ಶವಗಳ ಶೋಧನೆ ನಡೆಸಿದ್ದಾರೆ.
ಸ್ಥಳಕ್ಕೆ ತಲಕಾಡು ಠಾಣೆಯ ಪೊಲೀಸರು ಧಾವಿಸಿದ್ದು, ಶವದ ಶೋಧನೆಗೆ ನೆರವಾಗಿದ್ದಾರೆ. ಜಿಲ್ಲಾ ಅಡಿಷನಲ್ ಎಸ್ಪಿ ಮಲಿಕ್, ನಂಜನಗೂಡು ಡಿವೈಎಸ್ಪಿ ರಘು, ತಲಕಾಡು ಎಸ್ಐ ಆನಂದ್ ಕುಮಾರ್, ಎಸ್ಐ ಮಹದೇವು, ಎಎಸ್ಐ ನಾಗೇಂದ್ರ, ಸಿಬ್ಬಂದಿ ವರ್ಗ, ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹಗಳ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…