ಮೈಸೂರು

ತಲಕಾಡು | ನದಿ ನೀರಿಗಿಳಿದ ಐವರ ಪೈಕಿ ಇಬ್ಬರ ದುರ್ಮರಣ

ತಲಕಾಡು (ತಿ.ನರಸೀಪುರ ತಾ.): ನದಿ ನೀರಿಗಿಳಿದು ಐವರು ಗೆಳೆಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಮೇದಿನಿ ಗ್ರಾಮದ ಶ್ರೀ ರಾಮ ಕಟ್ಟೆಯ ನದಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಕೊಳ್ಳೇಗಾಲ ಮೂಲದ ಭರತ್ (17) ಮತ್ತು ಲಿಖಿತ್ (18) ಎಂಬ ವಿದ್ಯಾರ್ಥಿಗಳು ಮೃತಪಟ್ಟವರು. ಭರತ್, ಲಿಖಿತ್, ಅಕ್ಷಯ್, ಡ್ಯಾನಿಯಲ್, ಭಾರತ್ ಎಂಬ ಐವರು ಕೊಳ್ಳೇಗಾಲ ಪಟ್ಟಣದ ಮಾನಸ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದು, ಇತ್ತೀಚೆಗಷ್ಟೇ ಪರೀಕ್ಷೆ ಬರೆದಿದ್ದರು. ಶನಿವಾರ ಮಧ್ಯಾಹ್ನ ವಿಹಾರಾರ್ಥವಾಗಿ ಮೇದಿನಿ ಶ್ರೀರಾಮ ಅಣೆಕಟ್ಟೆಯ ಬಳಿಗೆ ತೆರಳಿದ್ದರು.

ಭರತ್ ಹಾಗೂ ಲಿಖಿತ್ ನದಿಗಿಳಿದು ನೀರಿನಲ್ಲಿ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ನೀರಿನ ಆಳಕ್ಕೆ ಜಾರಿದ್ದಾರೆ. ಇಬ್ಬರಿಗೂ ಈಜು ಬಾರದ್ದರಿಂದ ಅಪಾಯದಿಂದ ಪಾರಾಗಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಕಟ್ಟೆಯ ಗೇಟ್ ಒಳಗಡೆಯಿಂದ ಹೊರನದಿಗೆ ನೂಕಲ್ಪಟ್ಟಿರಬಹುದು ಎಂದು ಅಂದಾಜು ನಡೆಸಿದ ಪೊಲೀಸರು, ಗೇಟ್ ಬಳಿ ಸೇರಿದಂತೆ ಗೇಟ್ ಕೆಳಭಾಗದ ನದಿ ಉದ್ದಕ್ಕೂ ಶವಗಳ ಶೋಧನೆ ನಡೆಸಿದ್ದಾರೆ.

ಸ್ಥಳಕ್ಕೆ ತಲಕಾಡು ಠಾಣೆಯ ಪೊಲೀಸರು ಧಾವಿಸಿದ್ದು, ಶವದ ಶೋಧನೆಗೆ ನೆರವಾಗಿದ್ದಾರೆ. ಜಿಲ್ಲಾ ಅಡಿಷನಲ್ ಎಸ್‌ಪಿ ಮಲಿಕ್, ನಂಜನಗೂಡು ಡಿವೈಎಸ್‌ಪಿ ರಘು, ತಲಕಾಡು ಎಸ್‌ಐ ಆನಂದ್ ಕುಮಾರ್, ಎಸ್‌ಐ ಮಹದೇವು, ಎಎಸ್‌ಐ ನಾಗೇಂದ್ರ, ಸಿಬ್ಬಂದಿ ವರ್ಗ, ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹಗಳ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

46 mins ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

2 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

3 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

3 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

6 hours ago