ಮೈಸೂರು

ತಲಕಾಡು | ನದಿ ನೀರಿಗಿಳಿದ ಐವರ ಪೈಕಿ ಇಬ್ಬರ ದುರ್ಮರಣ

ತಲಕಾಡು (ತಿ.ನರಸೀಪುರ ತಾ.): ನದಿ ನೀರಿಗಿಳಿದು ಐವರು ಗೆಳೆಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಮೇದಿನಿ ಗ್ರಾಮದ ಶ್ರೀ ರಾಮ ಕಟ್ಟೆಯ ನದಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಕೊಳ್ಳೇಗಾಲ ಮೂಲದ ಭರತ್ (17) ಮತ್ತು ಲಿಖಿತ್ (18) ಎಂಬ ವಿದ್ಯಾರ್ಥಿಗಳು ಮೃತಪಟ್ಟವರು. ಭರತ್, ಲಿಖಿತ್, ಅಕ್ಷಯ್, ಡ್ಯಾನಿಯಲ್, ಭಾರತ್ ಎಂಬ ಐವರು ಕೊಳ್ಳೇಗಾಲ ಪಟ್ಟಣದ ಮಾನಸ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದು, ಇತ್ತೀಚೆಗಷ್ಟೇ ಪರೀಕ್ಷೆ ಬರೆದಿದ್ದರು. ಶನಿವಾರ ಮಧ್ಯಾಹ್ನ ವಿಹಾರಾರ್ಥವಾಗಿ ಮೇದಿನಿ ಶ್ರೀರಾಮ ಅಣೆಕಟ್ಟೆಯ ಬಳಿಗೆ ತೆರಳಿದ್ದರು.

ಭರತ್ ಹಾಗೂ ಲಿಖಿತ್ ನದಿಗಿಳಿದು ನೀರಿನಲ್ಲಿ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ನೀರಿನ ಆಳಕ್ಕೆ ಜಾರಿದ್ದಾರೆ. ಇಬ್ಬರಿಗೂ ಈಜು ಬಾರದ್ದರಿಂದ ಅಪಾಯದಿಂದ ಪಾರಾಗಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಕಟ್ಟೆಯ ಗೇಟ್ ಒಳಗಡೆಯಿಂದ ಹೊರನದಿಗೆ ನೂಕಲ್ಪಟ್ಟಿರಬಹುದು ಎಂದು ಅಂದಾಜು ನಡೆಸಿದ ಪೊಲೀಸರು, ಗೇಟ್ ಬಳಿ ಸೇರಿದಂತೆ ಗೇಟ್ ಕೆಳಭಾಗದ ನದಿ ಉದ್ದಕ್ಕೂ ಶವಗಳ ಶೋಧನೆ ನಡೆಸಿದ್ದಾರೆ.

ಸ್ಥಳಕ್ಕೆ ತಲಕಾಡು ಠಾಣೆಯ ಪೊಲೀಸರು ಧಾವಿಸಿದ್ದು, ಶವದ ಶೋಧನೆಗೆ ನೆರವಾಗಿದ್ದಾರೆ. ಜಿಲ್ಲಾ ಅಡಿಷನಲ್ ಎಸ್‌ಪಿ ಮಲಿಕ್, ನಂಜನಗೂಡು ಡಿವೈಎಸ್‌ಪಿ ರಘು, ತಲಕಾಡು ಎಸ್‌ಐ ಆನಂದ್ ಕುಮಾರ್, ಎಸ್‌ಐ ಮಹದೇವು, ಎಎಸ್‌ಐ ನಾಗೇಂದ್ರ, ಸಿಬ್ಬಂದಿ ವರ್ಗ, ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹಗಳ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago