ಮೈಸೂರು: ದೆಹಲಿಯ ಎಸ್.ಪಿ. ಮುಖರ್ಜಿ ಕ್ರೀಡಾಂಗಣದಲ್ಲಿ ಫೆ.7 ರಿಂದ 13ರವರೆಗೆ ನಡೆಯಲಿರುವ ಬಿಐಎಂಎಸ್ಟಿಇಸಿ ಅಂತರಾಷ್ಟ್ರೀಯ ಈಜು ಚಾಂಪಿಯನ್ ಶಿಪ್ನಲ್ಲಿ ಮೈಸೂರಿನ ತಾನ್ಯ ಭಾರತದ ಪರವಾಗಿ ಪ್ರತಿನಿಧಿಸಲಿದ್ದಾರೆ.
ಈ ಸ್ಪರ್ಧೆಗೆ ಆಯ್ಕೆಯಾದ ಮೈಸೂರಿನ ಪ್ರಥಮ ಈಜುಪಟು ಎಂಬ ಹಿರಿಮೆ ಇವರು ಭಾಜನರಾಗಿದ್ದಾರೆ.
ಸ್ಪರ್ಧೆಯಲ್ಲಿ 7 ದೇಶಗಳಿಂದ 14ರಿಂದ 20ನೇ ವಯಸ್ಸಿನೊಳಗೆ ಈಜುಪಟುಗಳು ಸ್ಪರ್ಧಿಸಲಿದ್ದು, 14ನೇ ವಯಸ್ಸಿನ ತಾನ್ಯಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ಅತ್ಯಂತ ಕಿರಿಯ ವಯಸ್ಸಿನ ಈಜುಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈಜು ಚಾಂಪಿಯನ್ ಶಿಪ್ನಲ್ಲಿ 400 ಮೀ. ವೈಯಕ್ತಿಕ ಮೆಡ್ಲೆ ವಿಭಾಗದಲ್ಲಿ ತಾನ್ಯ ಸ್ಪರ್ಧಿಸಲಿದ್ದಾರೆ.
ನಗರದ ಜೆ.ಪಿ ನಗರ ಗ್ಲೋಬಲ್ ಸ್ಪೋರ್ಟ್ಸ್ನ ಪವನ್ ಕುಮಾರ್ ಅವರಿಂದ ತಾನ್ಯ ತರಬೇತಿಯನ್ನು ಪಡೆಯುತ್ತಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…