ಮೈಸೂರು: ದೆಹಲಿಯ ಎಸ್.ಪಿ. ಮುಖರ್ಜಿ ಕ್ರೀಡಾಂಗಣದಲ್ಲಿ ಫೆ.7 ರಿಂದ 13ರವರೆಗೆ ನಡೆಯಲಿರುವ ಬಿಐಎಂಎಸ್ಟಿಇಸಿ ಅಂತರಾಷ್ಟ್ರೀಯ ಈಜು ಚಾಂಪಿಯನ್ ಶಿಪ್ನಲ್ಲಿ ಮೈಸೂರಿನ ತಾನ್ಯ ಭಾರತದ ಪರವಾಗಿ ಪ್ರತಿನಿಧಿಸಲಿದ್ದಾರೆ.
ಈ ಸ್ಪರ್ಧೆಗೆ ಆಯ್ಕೆಯಾದ ಮೈಸೂರಿನ ಪ್ರಥಮ ಈಜುಪಟು ಎಂಬ ಹಿರಿಮೆ ಇವರು ಭಾಜನರಾಗಿದ್ದಾರೆ.
ಸ್ಪರ್ಧೆಯಲ್ಲಿ 7 ದೇಶಗಳಿಂದ 14ರಿಂದ 20ನೇ ವಯಸ್ಸಿನೊಳಗೆ ಈಜುಪಟುಗಳು ಸ್ಪರ್ಧಿಸಲಿದ್ದು, 14ನೇ ವಯಸ್ಸಿನ ತಾನ್ಯಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ಅತ್ಯಂತ ಕಿರಿಯ ವಯಸ್ಸಿನ ಈಜುಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈಜು ಚಾಂಪಿಯನ್ ಶಿಪ್ನಲ್ಲಿ 400 ಮೀ. ವೈಯಕ್ತಿಕ ಮೆಡ್ಲೆ ವಿಭಾಗದಲ್ಲಿ ತಾನ್ಯ ಸ್ಪರ್ಧಿಸಲಿದ್ದಾರೆ.
ನಗರದ ಜೆ.ಪಿ ನಗರ ಗ್ಲೋಬಲ್ ಸ್ಪೋರ್ಟ್ಸ್ನ ಪವನ್ ಕುಮಾರ್ ಅವರಿಂದ ತಾನ್ಯ ತರಬೇತಿಯನ್ನು ಪಡೆಯುತ್ತಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…