mysure kannada veedike
ಮೈಸೂರು : ಬೀದಿ ಬದಿಯ ಸಣ್ಣಪುಟ್ಟ ಗೂಡಂಗಡಿಗಳವರಿಗೂ ಜಿಎಸ್ಟಿ ಪಾವತಿಸುವಂತೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಮಾತನಾಡಿ, ಸರ್ಕಾರಿ ಕೆಲಸವನ್ನು ನಿರೀಕ್ಷೆ ಮಾಡದೆ ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಂಡಿರುವ ಬೀದಿ ಬದಿ ವ್ಯಾಪಾರಿಗಳನ್ನು ಬೀದಿ ಪಾಲು ಮಾಡಲು ಹೊರಟಿರುವ ಸರ್ಕಾರದ ಆರ್ಥಿಕ ನೀತಿ ಖಂಡನೀಯ. ಡಿಜಿಟಲ್ ಪಾವತಿ ಹೆಸರಿನಲ್ಲಿ ವ್ಯಾಪಾರಿಗಳನ್ನು ನಂಬಿಸಿ ಈಗ ಏಕಾಏಕಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡುತ್ತಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.
ಸರ್ಕಾರದ ನೀತಿ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬೀದಿ ಬದಿ ವ್ಯಾಪಾರಿಗಳು, ಹೂವಿನ ವ್ಯಾಪಾರಿಗಳು, ಹಾಲಿನ ವ್ಯಾಪಾರಿಗಳು ಮತ್ತು ಅವರ ಕುಟುಂಬಗಳು ಬೀದಿಗೆ ಬೀಳುವುದರಲ್ಲಿ ಅನುಮಾನವಿಲ್ಲ. ಸರ್ಕಾರ ಕೂಡಲೇ ಎಚ್ಚೆತ್ತು ಬೀದಿ ಬದಿ ವ್ಯಾಪಾರಿಗಳು ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಅಽಕಾರಿಗಳ ಸಮನ್ವಯ ಸಭೆಯನ್ನು ಕರೆದು, ಸಣ್ಣಪುಟ್ಟ ವ್ಯಾಪಾರಿಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವು ದನ್ನು ಕೈಬಿಡುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ವೇದಿಕೆಯ ಪದಾಧಿಕಾರಿಗಳಾದ ನಾಲಾಬೀದಿ ರವಿ, ಗುರುಬಸಪ್ಪ, ಬೋಗಾದಿ ಸಿದ್ದೇಗೌಡ, ಗೋಪಿ, ಪ್ಯಾಲೇಸ್ ಬಾಬು, ಹರೀಶ್, ಮಹದೇವ ಸ್ವಾಮಿ, ಎಲ್ಐಸಿ ಸಿದ್ದಪ್ಪ, ಗೋವಿಂದರಾಜು, ಸ್ವಾಮಿ, ಚಿನ್ನಪ್ಪ, ಶಿವೇಗೌಡ, ಪ್ರೇಮ ಮಾಲಿನಿ, ಪುಷ್ಪಲತಾ, ರಮೇಶ್, ಸ್ವಾಮಿ ಗೈಡ್, ಮಾದಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…