ಮೈಸೂರು

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕನನ್ನು ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಕೆ.ರಂಗನಾಥ್ ಎಂದು ಗುರುತಿಸಲಾಗಿದೆ.

ಶಿಕ್ಷಕ ಸಿ.ಕೆ.ರಂಗನಾಥ್‌ ಅವರು ಹುಣಸೂರು ತಾಲ್ಲೂಕಿನ ಗಾವಡಗೆರೆ ಹೋಬಳಿಯ ಮುಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶಿಕ್ಷಣ ಇಲಾಖೆ ಸಿ.ಕೆ.ರಂಗನಾಥ್ ಅವರನ್ನು ಜನಗಣತಿ ಮಾಡಲು ನಿಯೋಜಿಸಿತ್ತು. ಇಂದು ಬೆಳಗ್ಗೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ಜನಗಣತಿ ಮಾಡುವ ವೇಳೆ ಅವರಿಗೆ ಹೃದಯಘಾತವಾಗಿದ್ದು, ಸ್ಥಳೀಯರು ತಕ್ಷಣವೇ ಪಟ್ಟಣದ ಸಾರ್ವಜನಿಕ ತಾಲ್ಲೂಕು ಆಸ್ಪತ್ರೆ ಕರತಂದರೂ ಯಾವುದೇ ಪ್ರಯೋಜನವಾಗಲಿಲ್ಲ.

ಇವರು ಪಟ್ಟಣದ ಕೊಳಲು ರಸ್ತೆಯ ಕುವೆಂಪು ಬಡಾವಣೆಯಲ್ಲಿ ವಾಸವಾಗಿದ್ದರು. ಇವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಚಿಕ್ಕನಾಯಕನಹಳ್ಳಿ ಗ್ರಾಮಕ್ಕೆ ಕೊಂಡೋಯ್ದು ಅಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

 

 

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

5 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago