ಎಚ್.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಹಂಪಾಪುರ ಸಮೀಪದ ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಅವರ ಪತಿ ಕಿರಣ್ ಕುಮಾರ್(47), ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ಬುಧವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆದ್ರೆ ಮಾರ್ಚ್ 28 ರಂದು ಎಸ್ಎಸ್ಎಲ್ಸಿ ಗಣಿತ ಪರೀಕ್ಷೆ ಇರುವ ಕಾರಣ ವಿದ್ಯಾರ್ಥಿಗಳ ಭವಿಷ್ಯಕ್ಕೊಸ್ಕರ ದುಃಖದ ಮಡುವಿನಲ್ಲಿದ್ದರೂ ಜ್ಯೋತಿ ಮರುದಿನವೇ ಶಾಲೆಗೆ ಹಾಜರಾಗಿ ಗಣಿತ ವಿಷಯದ ಬಗ್ಗೆ ಮಕ್ಕಳಿಗೆ ಪೂರ್ವ ಸಿದ್ಧತೆ ಮಾಡಿಸಿದ್ದಾರೆ.
ಶಿಕ್ಷಣಾಧಿಕಾರಿ ಅವರು ನೀವು ರಜೆ ಪಡೆಯಿರಿ ನಾವು ಬೇರೆ ಶಿಕ್ಷಕರನ್ನ ನಿಯೋಜನೆ ಮಾಡ್ತೀವಿ ಅಂದ್ರು ಸಹ ಗಣಿತ ವಿಷಯ ಸಂಪೂರ್ಣವಾಗಿ ನಾನೇ ಬೋಧಿಸಿದ್ದೇನೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಗಣಿತ ಸ್ವಲ್ಪ ಕಠಿಣವಾಗಿರುತ್ತದೆ. ಎಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಬೇಕು ಎಂಬ ಉದ್ದೇಶದಿಂದ ಶಾಲೆಗೆ ಬಂದಿದ್ದೇನೆ. ನಾಳೆಯೂ ಬಂದು ಮಕ್ಕಳೊಂದಿಗೆ ಇರುತ್ತೇನೆ ಎಂದು ಹೇಳಿ ಶಿಕ್ಷಕಿ ಜ್ಯೋತಿ ಅವರು ಜಿ.ಬಿ ಸರಗೂರು ಗ್ರಾಮದ ಶಾಲೆಗೆ ಹಾಜರಾಗಿ 222 ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಪೂರ್ವ ಸಿದ್ಧತೆ ಕುರಿತು ಮಾರ್ಗದರ್ಶನ ನೀಡಿದ್ದಾರೆ.
ಪೋಷಕರು, ಸಾರ್ವಜನಿಕರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಜ್ಯೋತಿ ಅವರ ಕಾರ್ಯಕ್ಕೆ ಗೌರವ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…