ಮೈಸೂರು

ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು : ಶಾಸಕ ಜಿಟಿಡಿ

ಮೈಸೂರು : ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬರುತ್ತಿದೆ. ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಾರೆ.ಅಂತಹವರನ್ನು ಗುರುತಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು.

ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳ ಸೌಲಭ್ಯ ಒದಗಿಸುವುದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆ ಮಾಡುವುದು ಹೆಚ್ಚಾಗಿದೆ. ಓದುವ ಮಕ್ಕಳಲ್ಲಿ ಮೊಬೈಲ್ ಬಳಸದಂತೆಹಾಗೂ ಮೊಬೈಲ್ ಸಂಸ್ಕೃತಿಯನ್ನು ದೂರವಿರಿಸಿ ಶಿಕ್ಷಣದ ಕಡೆಗೆ ಗಮನಹರಿಸುವಂತೆ ಮಾಡಬೇಕು.

ಪ್ರತಿಭಾವಂತ ಮಕ್ಕಳನ್ನು ತಯಾರು ಮಾಡುವ ಜವಾಬ್ದಾರಿ ಅರಿತು ಕೆಲಸಮಾಡಬೇಕು ಎಂದರು. ಬಡವರ ಮಕ್ಕಳು ಮೆರಿಟ್‌ನಲ್ಲಿ ತೇರ್ಗಡೆ ಹೊಂದುವಂತೆ ಮಾಡಬೇಕು. ಬಡವರ ಮಕ್ಕಳಿಗೆ ಶಿಕ್ಷಣಕೊಡಿಸುವ ಅವಕಾಶವನ್ನು ದೇವರು ಕಲ್ಪಿಸಿದ್ದಾನೆ. ಸಂಬಳಕ್ಕಾಗಿ ಕೆಲಸ ಮಾಡದೆ ನಿಸ್ವಾರ್ಥ ಸೇವೆಯನ್ನು ಇಟ್ಟುಕೊಂಡುಕೆಲಸಮಾಡಬೇಕಿದೆ. ನಮ್ಮ ತಂದೆ ಬಡವರು.

ಹಸು ಸಾಕಲು ಊರಿನ ಹೊರಗೆ ಹುಲ್ಲು ತರುತ್ತಿದ್ದೆ. ಕುಟುಂಬದ ಹೊಣೆ ಹೊತ್ತು ಹಗಲುರಾತ್ರಿ ಕೆಲಸ ಮಾಡಿದ್ದೇನೆ. ಸೊಸೈಟಿಯಲ್ಲಿ ಅಕ್ಕಿ ಅಳೆಯುತ್ತಿದ್ದೆ. ಅಲ್ಲಿಯೇ ಮಲಗಿ ಜನರ ಸಂಪಾದನೆ ಮಾಡಿದೆ. ನಂತರ,ಸಹಕಾರ ಕ್ಷೇತ್ರದಿಂದ ಮೇಲಕ್ಕೆ ಬಂದಿದ್ದೇನೆ ಎಂದರು. ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರು ತಮ್ಮ ಶಾಲೆಯನ್ನು ಹದ್ದುಬಸ್ತಿನಲ್ಲಿಡಬೇಕು.

ಶೌಚಾಲಯ,ಕುಡಿಯುವ ನೀರಿನ ಗಮನಹರಿಸಬೇಕು. ಕೆಲವು ಗ್ರಾಮಗಳ ಶಾಲೆಗಳಲ್ಲಿ ಕಸ ಕ್ಲೀನ್ ಮಾಡದೆ ಕೆಲವು ಕಡೆ ಹಾಗೆಯೇ ಬಿದ್ದಿರುತ್ತದೆ. ಬರೀ ಪಾಠ ಮಾಡುವುದಕ್ಕೆ ಮಾತ್ರಮುಖ್ಯ ಶಿಕ್ಷಕರ ಕೆಲಸವಲ್ಲ. ಶಾಲೆಯನ್ನು ತಮ್ಮ ಮನೆಯಂತೆ ಜವಾಬ್ದಾರಿಯಿಂದ ಗಮನಿಸಬೇಕು. ಶಾಲೆಗಳ ಸರ್ವೆ ಮಾಡಿ ಹಕ್ಕುಪತ್ರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಭ್ರಷ್ಟಾಚಾರರಹಿತ ಕ್ಷೇತ್ರ:ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಭ್ರಷ್ಟಾಚಾರ ಇಲ್ಲದೆ ನಡೆಯುತ್ತಿರುವ ಕ್ಷೇತ್ರ ಇದ್ದರೆ ಅದು ಶಿಕ್ಷಕರ ಕ್ಷೇತ್ರವಾಗಿದೆ. ಸೇವಾ ಮನೋಭಾವ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದಾದರೇ ಅದು ಶಿಕ್ಷಕರು ಮಾತ್ರ ಎಂದು ಬಣ್ಣಿಸಿದರು.

ಡಾ.ರಾಧಾಕೃಷ್ಣನ್ ಅವರ ಬಗ್ಗೆ ಹೇಳಬೇಕಿಲ್ಲ. ದೇಶದಲ್ಲೇ ತತ್ವಜ್ಞಾನಿ,ದೊಡ್ಡ ಮೇಧಾವಿಯಾಗಿದ್ದರು. ಒಬ್ಬ ಶಿಕ್ಷಕರೊಬ್ಬರು ಏನೆಲ್ಲಾ ಪದವಿಗಳನ್ನು ಪಡೆಯಬಹುದು ಎಂಬುದಕ್ಕೆ ಅವರೇ ಉದಾಹರಣೆಯಾಗಿದ್ದಾರೆ. ಶಿಕ್ಷಕರು ದೇಶದ ಭವಿಷ್ಯವನ್ನು ನಿರ್ಮಿಸುವ ಹೊಣೆ ಹೊಂದಿದ್ದಾರೆ. ಶಿಕ್ಷಕರ ದಿನಾಚರಣೆತ ದಿನದಂದು ಪ್ರಧಾನಮಂತ್ರಿಗಳು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಶಿಕ್ಷಕರನ್ನುನೆನಪಿಸಿಕೊಂಡರು. ನಡಿಗೆ ಮೂಲಕ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಿ ಬರುತ್ತಿದ್ದರು. ಈಗ ರಸ್ತೆ,ಬಸ್ ವ್ಯವಸ್ಥೆ ಮಾಡಿಕೊಡಲಾಗಿದೆ. ಶಿಕ್ಷಣ,ಕಲೆ,ಸಾಹಿತ್ಯ,ಸಂಗೀತ,ಯೋಗ,ಧ್ಯಾನ ಕಲಿಸಬೇಕು ಎಂದರು.

ದಲಿತ ಮಹಿಳೆ ಸಾವಿತ್ರಿಬಾಪುಲೆ ಅವರು ಶಾಲೆಯನ್ನು ತೆರೆದು ಮಕ್ಕಳಿಗೆ ಶಿಕ್ಷಣ ಕೊಡಿಸಲು ಶ್ರಮಿಸಿದರು. ಮೊದಲ ಶಿಕ್ಷಕಿಯಾಗಿ ಕೆಲಸ ಮಾಡಿದ ಸಾವಿತ್ರಿಬಾಪುಲೆ ಅವರ ತತ್ವ,ಸಿದ್ಧಾಂತಗಳನ್ನು ಅಳವಡಿಸಿಕೊಂಡು ಸಾಗಬೇಕು. ಕಲಿಸು ಫೌಂಡೇಷನ್‌ನಿಂದ ೨೦ ಲಕ್ಷ, ಕೆನರಾ ಬ್ಯಾಂಕ್‌ನಿಂದ ೧ ಕೋಟಿ, ಟಿವಿಎಸ್,ಐಟಿಸಿ ಕಂಪೆನಿ,ಸಾಯಿ ಗಾರ್ಮೆಂಟ್ಸ್, ಜೆ.ಕೆ.ಟೈರ್ಸ್‌ ಸೇರಿದಂತೆ ಅನೇಕ ಕಂಪನಿಗಳು,ಕಾರ್ಖಾನೆಯವರು ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಸ್ಮಾರ್ಟ್‌ಕ್ಲಾಸ್ ಕೊಠಡಿಗಳನ್ನು ನಿರ್ಮಿಸಿಕೊಟ್ಟಿದ್ದಾರೆ ಶಿಕ್ಷಕರು ತುಂಬಾ ಸಂತೋಷದಿಂದ ಬಂದಿದ್ದಾರೆ. ಗುರುಗಳ ಸ್ಥಾನದಲ್ಲಿ ಇರುವ ಶಿಕ್ಷಕರು ಉತ್ತಮ ಪ್ರಜೆಗಳನ್ನರೂಪಿಸಬೇಕು. ಶಿಸ್ತನ್ನುಕಾಪಾಡಿಕೊಳ್ಳಬೇಕು.

ಶಾಲೆಗಳಿಗೆ ಬೇಕಾದ ಕೊಠಡಿಗಳು,ಕುಡಿಯುವ ನೀರು,ಶೌಚಾಲಯ ಇಲ್ಲವೆಂದರೆ ಕಟ್ಟಿಸಿಕೊಡುವ ಶ್ರೀಮಂತರು ಇಲ್ಲೇ ಕುಳಿತಿದ್ದಾರೆ.ಆದರೆ,ಶಿಕ್ಷಕರು ಪದೇ ಪದೇ ಎದ್ದು ಹೋಗಿ ಮಾಡುವುದು ಸರಿಯಲ್ಲ. ಶಿಕ್ಷಕರೇ ಶಿಸ್ತು ಕಲಿಯದಿದ್ದರೆ ಬೇರೆಯವರಿಗೆ ಹೇಗೆ ಕಲಿಸಲು ಸಾಧ್ಯವಿದೆ ಎಂದು ಬೇಸರಿಸಿದರು.

ಇಂದು ಇರುವ ಜಮೀನುಗಳನ್ನುಮಾರಾಟ ಮಾಡಿ ಮದುವೆ ಮಾಡುವುದು ಹೆಚ್ಚಾಗುತ್ತಿದೆ. ಶಿಕ್ಷಕರು ಸರಳ ವಿವಾಹದ ಬಗ್ಗೆ ಅರಿವು ಮೂಡಿಸಬೇಕು. ಸಮಾಜವನ್ನು ಬದಲಿಸುವ ಕೆಲಸ ಮಾಡಬೇಕು. ನಾನೇನನ್ನ ಮಗ,ಇಬ್ಬರು ಹೆಣ್ಣು ಮಕ್ಕಳಿಗೆ ತಿರುಪತಿಯಲ್ಲಿ, ತಮ್ಮನ ಮಗನ ಮದುವೆಯನ್ನು ಧರ್ಮಸ್ಥಳದಲ್ಲಿ ಮದುವೆ ಮಾಡಿದ್ದೇನೆ. ಹಾಗಾಗಿ, ಹೆಣ್ಣು ಮಕ್ಕಳಿಗೆ ಸರಳ ವಿವಾಹ ಮಾಡಿ ಅವರ ಹೆಸರಿನಲ್ಲಿ ಜಮೀನು ಬರೆದುಕೊಡಬೇಕು ಎಂದು ನುಡಿದರು.ಜಿಪಂ ಮಾಜಿ ಸದಸ್ಯೆ ಚಂದ್ರಿಕಾ ಸುರೇಶ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ.ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಮತ್ತಿತರರು ಹಾಜರಿದ್ದರು. ಮೈಸೂರಿನ ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು..ಜಿಪಂ ಮಾಜಿ ಸದಸ್ಯೆ ಚಂದ್ರಿಕಾ ಸುರೇಶ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ.ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

51 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago