ಮೈಸೂರು: ಇಲ್ಲಿನ ಮಹಾರಾಜ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕಾಲೇಜಿನ ಸಿಬ್ಬಂದಿಯವರಿಂದ ಅರ್ಥಪೂರ್ಣವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೇವರಾಜ ಗೌಡ ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸರ್ವಪಲ್ಲಿ ರಾಧಾಕೃಷ್ಣರವರು, ಮಹಾರಾಜ ಕಾಲೇಜಿನಲ್ಲೇ ಪ್ರಾಧ್ಯಾಪಕರಾಗಿದ್ದುಕೊಂಡು, ಇದೇ ಕಾಲೇಜಿನಲ್ಲಿ ಉತ್ತಮ ಶಿಕ್ಷಕರಾಗಿ ದೇಶದ ಉಪರಾಷ್ಟ್ರಪತಿ ಹಾಗೂ ರಾಷ್ಟ್ರಪತಿಯಾದರು. ಶಿಕ್ಷಕ ಕ್ಷೇತ್ರದಲ್ಲಿ ಅವರ ಗಣನೀಯ ಸೇವೆ ಗುರುತಿಸಿ ಅವರ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಘೋಷಿಸಲಾಯಿತು ಎಂದರು.
ಭಾರತದ ರಾಷ್ಟ್ರಪತಿಯಾಗಿದ್ದ ರಾಧಾಕೃಷ್ಣ ರವರ, ಶಿಕ್ಷಣ ವೈಖರಿ, ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ, ಮಹಾರಾಜ ಕಾಲೇಜಿನಲ್ಲಿ ಅವರು, ಬೆಳೆಸಿದ ವಿದ್ಯಾರ್ಥಿ ಬಳಗ… ಶಿಕ್ಷಕ ವೃತ್ತಿಗೆ ಅರ್ಥಪೂರ್ಣವಾದ ಬೆಳಕನ್ನು ಚೆಲ್ಲಿದ, ಸರ್ವಪಲ್ಲಿ ರಾಧಾಕೃಷ್ಣರವರನ್ನು ಸ್ಮರಿಸಿದರು.
ಆಡಳಿತ ಅಧಿಕಾರಿ ಪ್ರೊ. ವಿ. ಷಣ್ಮುಗಂ, ಪ್ರಾಧ್ಯಾಪಕರಾದ ಡಾ.ಲೋಕೆಶ್, ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಯ ಕಾರ್ಯಕ್ರಮಧಿಕಾರಿಗಳಾದ ಡಾ. ಎಸ್ ಕೃಷ್ಣಪ್ಪ, ಡಾ. ಮಧುಸೂದನ್ ಪಿ.ಎಸ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…