ಮೈಸೂರು

ಕುಕ್ಕರಹಳ್ಳಿ ಕೆರೆ ಏರಿ ಕುರಿತ ಡಿಸೈನ್ ವಿಂಗ್‌ನ ತಂಡದ ವರದಿ ಸಿದ್ಧ

ಮೈಸೂರು: ಕುಕ್ಕರಹಳ್ಳಿ ಕೆರೆಯನ್ನು ಪರಿಶೀಲನೆ ನಡೆಸಿದ್ದ ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್‌ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ವರದಿಯನ್ನು ಸಿದ್ಧ ಪಡಿಸಿದೆ.

ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್‌ಗಳು ಕುಕ್ಕರಹಳ್ಳಿ ಕೆರೆಯ ಮಣ್ಣಿನ ಪರೀಕ್ಷೆ ನಡೆಸಿ ನೀಡುವ ವರದಿಯ ಜೊತೆಗೆ ಡಿಸೈನ್ ವಿಂಗ್‌ನ ತಂಡವು ಮೈಸೂರು ವಿಶ್ವವಿದ್ಯಾನಿಲಯಕ್ಕೆ ವರದಿಯನ್ನು ಸಲ್ಲಿಸಲಿದೆ. ಈ ತಂಡವು ಅ.31 ರಂದು ಕೆರೆಯನ್ನು ಪರಿಶೀಲನೆ ನಡೆಸಿತ್ತು.

ತುರ್ತು ಸಮಯದಲ್ಲಿ ಕೆರೆಯಲ್ಲಿನ ಪ್ರವಾಹವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮತ್ತು ನೀರನ್ನು ಹೊರಹಾಕಲು ಸ್ಲೂಸೈ ಗೇಟ್ ಹೊರತುಪಡಿಸಿ ಮತ್ಯಾವುದೇ ಪರಿಣಾಮಕಾರಿ ವ್ಯವಸ್ಥೆ ಇಲ್ಲ. ಹೀಗಾಗಿ ಹೆಡ್ ರೆಗ್ಯುಲೇಟರ್ ಅನ್ನು ಅಳವಡಿಸಬೇಕು. ಇದನ್ನು ಅಳವಡಿಸಲು ಸೂಚಿಸಿರುವ ಜಾಗದಲ್ಲಿ ಎಸ್‌ಬಿಸಿ ಪರೀಕ್ಷೆ ಮತ್ತು ಮಣ್ಣಿನ ವರ್ಗೀಕರಣದ ವರದಿಯನ್ನು ಒದಗಿಸುವ ಅಗತ್ಯವಿದೆ ಎಂದು ತಿಳಿಸಲಾಗಿದೆ.

ಕೆರೆಯ ಬಂಡ್‌ನ ಮಣ್ಣಿನ ವರ್ಗೀಕರಣ, ತೇವಾಂಶ, ಸಾಂದ್ರತೆ, ಪ್ರವೇಶ ಸಾಧ್ಯತೆ ಮತ್ತು ನಿರ್ದಿಷ್ಟ ಗುರುತ್ವಾಕರ್ಷಣೆಯಂತಹ ಮಣ್ಣಿನ ನಿಯತಾಂಕಗಳ ಫಲಿತಾಂಶದ ವರದಿಯನ್ನು ಕೆಇಆರ್‌ಎಸ್‌ನಿಂದ ಪಡೆಯಲು ತಿಳಿಸಿದೆ. ಡೌನ್‌ಸ್ಟ್ರೀಮ್ ಬಂಡ್‌ನಲ್ಲಿ ತೇವವನ್ನು ಕಡಿಮೆ ಮಾಡಲು ಮತ್ತು ತಕ್ಷಣದ ಸುರಕ್ಷತಾ ಕ್ರಮವಾಗಿ ಸೋರಿಕೆಯಾಗುವ ನೀರನ್ನು ಸುರಕ್ಷಿತವಾಗಿ ಹೊರಹಾಕಲು ಬಂಡ್‌ನ ಕೆಳಭಾಗದಲ್ಲಿ ರಾಕ್ ಟೋ ನಿರ್ಮಿಸಲು ಸೂಚಿಸಿದೆ. ಕುಕ್ಕರಹಳ್ಳಿ ಕೆರೆ ನೀರು ಮತ್ತು ಲಿಂಗಾಂಬುಧಿ ಕೆರೆಯ ನೀರು ಒಟ್ಟಿಗೆ ಸೇರಿ ಹರಿಯಲಿದ್ದು, ಇದು ಹರಿಯವ ಕಾಲುವೆಯ ರೇಖಾಚಿತ್ರವನ್ನು ಒದಗಿಸುವಂತೆ ಕೇಳಿರುವ ಅಂಶಗಳನ್ನು ವರದಿ ಒಳಗೊಂಡಿದೆ.

 

 

 

andolana

Recent Posts

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

19 mins ago

ನಿರುದ್ಯೋಗಿಗಳ ಬದುಕಿನ ಬೆಳ್ಳಿ ರೇಖೆ ಯುವನಿಧಿ

ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…

23 mins ago

ಕಾರ್ಮಿಕರ ಹಿತ ಕಾಯುವ ಯೋಜನೆಗಳ ಜಾರಿ

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…

29 mins ago

ಮುಕ್ತಾಯ ಹಂತಕ್ಕೆ ತಲುಪಿದ ಬಯೋಮೈನಿಂಗ್

ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…

34 mins ago

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

8 hours ago