ಮೈಸೂರು

ಕುಕ್ಕರಹಳ್ಳಿ ಕೆರೆ ಏರಿ ಕುರಿತ ಡಿಸೈನ್ ವಿಂಗ್‌ನ ತಂಡದ ವರದಿ ಸಿದ್ಧ

ಮೈಸೂರು: ಕುಕ್ಕರಹಳ್ಳಿ ಕೆರೆಯನ್ನು ಪರಿಶೀಲನೆ ನಡೆಸಿದ್ದ ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್‌ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ವರದಿಯನ್ನು ಸಿದ್ಧ ಪಡಿಸಿದೆ.

ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್‌ಗಳು ಕುಕ್ಕರಹಳ್ಳಿ ಕೆರೆಯ ಮಣ್ಣಿನ ಪರೀಕ್ಷೆ ನಡೆಸಿ ನೀಡುವ ವರದಿಯ ಜೊತೆಗೆ ಡಿಸೈನ್ ವಿಂಗ್‌ನ ತಂಡವು ಮೈಸೂರು ವಿಶ್ವವಿದ್ಯಾನಿಲಯಕ್ಕೆ ವರದಿಯನ್ನು ಸಲ್ಲಿಸಲಿದೆ. ಈ ತಂಡವು ಅ.31 ರಂದು ಕೆರೆಯನ್ನು ಪರಿಶೀಲನೆ ನಡೆಸಿತ್ತು.

ತುರ್ತು ಸಮಯದಲ್ಲಿ ಕೆರೆಯಲ್ಲಿನ ಪ್ರವಾಹವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮತ್ತು ನೀರನ್ನು ಹೊರಹಾಕಲು ಸ್ಲೂಸೈ ಗೇಟ್ ಹೊರತುಪಡಿಸಿ ಮತ್ಯಾವುದೇ ಪರಿಣಾಮಕಾರಿ ವ್ಯವಸ್ಥೆ ಇಲ್ಲ. ಹೀಗಾಗಿ ಹೆಡ್ ರೆಗ್ಯುಲೇಟರ್ ಅನ್ನು ಅಳವಡಿಸಬೇಕು. ಇದನ್ನು ಅಳವಡಿಸಲು ಸೂಚಿಸಿರುವ ಜಾಗದಲ್ಲಿ ಎಸ್‌ಬಿಸಿ ಪರೀಕ್ಷೆ ಮತ್ತು ಮಣ್ಣಿನ ವರ್ಗೀಕರಣದ ವರದಿಯನ್ನು ಒದಗಿಸುವ ಅಗತ್ಯವಿದೆ ಎಂದು ತಿಳಿಸಲಾಗಿದೆ.

ಕೆರೆಯ ಬಂಡ್‌ನ ಮಣ್ಣಿನ ವರ್ಗೀಕರಣ, ತೇವಾಂಶ, ಸಾಂದ್ರತೆ, ಪ್ರವೇಶ ಸಾಧ್ಯತೆ ಮತ್ತು ನಿರ್ದಿಷ್ಟ ಗುರುತ್ವಾಕರ್ಷಣೆಯಂತಹ ಮಣ್ಣಿನ ನಿಯತಾಂಕಗಳ ಫಲಿತಾಂಶದ ವರದಿಯನ್ನು ಕೆಇಆರ್‌ಎಸ್‌ನಿಂದ ಪಡೆಯಲು ತಿಳಿಸಿದೆ. ಡೌನ್‌ಸ್ಟ್ರೀಮ್ ಬಂಡ್‌ನಲ್ಲಿ ತೇವವನ್ನು ಕಡಿಮೆ ಮಾಡಲು ಮತ್ತು ತಕ್ಷಣದ ಸುರಕ್ಷತಾ ಕ್ರಮವಾಗಿ ಸೋರಿಕೆಯಾಗುವ ನೀರನ್ನು ಸುರಕ್ಷಿತವಾಗಿ ಹೊರಹಾಕಲು ಬಂಡ್‌ನ ಕೆಳಭಾಗದಲ್ಲಿ ರಾಕ್ ಟೋ ನಿರ್ಮಿಸಲು ಸೂಚಿಸಿದೆ. ಕುಕ್ಕರಹಳ್ಳಿ ಕೆರೆ ನೀರು ಮತ್ತು ಲಿಂಗಾಂಬುಧಿ ಕೆರೆಯ ನೀರು ಒಟ್ಟಿಗೆ ಸೇರಿ ಹರಿಯಲಿದ್ದು, ಇದು ಹರಿಯವ ಕಾಲುವೆಯ ರೇಖಾಚಿತ್ರವನ್ನು ಒದಗಿಸುವಂತೆ ಕೇಳಿರುವ ಅಂಶಗಳನ್ನು ವರದಿ ಒಳಗೊಂಡಿದೆ.

 

 

 

andolana

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

14 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

3 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago