ಮೈಸೂರು

ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು

ಮೈಸೂರು :  ದುಷ್ಕರ್ಮಿಗಳು ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚುಂಚನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮಾದಯ್ಯನಗುಡಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಈ  ಘಟನೆ ನಡೆದಿದೆ. ರಾತ್ರಿಯ ಸಮಯದಲ್ಲಿ ಕಳ್ಳರು ಒಳ ನುಗ್ಗಿ ಬಾಗಿಲು ಮುರಿದು, ಹುಂಡಿಯ ಬೀಗವನ್ನು ಒಡೆದು ಹುಂಡಿಯಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ನಿನ್ನೆ ತಾನೇ ಎರಡು ದಿನಗಳ ಕಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆದಿತ್ತು. ಇಂದು ಗ್ರಾಮಸ್ಥರು ಹುಂಡಿ ಎಣಿಕೆ ಕಾರ್ಯ ಮಾಡಬೇಕಾಗಿತ್ತು. ಆದರೆ, ಖದೀಮರು ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕವಲಂದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

1 hour ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

3 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

3 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

4 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

4 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

5 hours ago