ಮೈಸೂರು

ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು

ಮೈಸೂರು :  ದುಷ್ಕರ್ಮಿಗಳು ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚುಂಚನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮಾದಯ್ಯನಗುಡಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಈ  ಘಟನೆ ನಡೆದಿದೆ. ರಾತ್ರಿಯ ಸಮಯದಲ್ಲಿ ಕಳ್ಳರು ಒಳ ನುಗ್ಗಿ ಬಾಗಿಲು ಮುರಿದು, ಹುಂಡಿಯ ಬೀಗವನ್ನು ಒಡೆದು ಹುಂಡಿಯಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ನಿನ್ನೆ ತಾನೇ ಎರಡು ದಿನಗಳ ಕಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆದಿತ್ತು. ಇಂದು ಗ್ರಾಮಸ್ಥರು ಹುಂಡಿ ಎಣಿಕೆ ಕಾರ್ಯ ಮಾಡಬೇಕಾಗಿತ್ತು. ಆದರೆ, ಖದೀಮರು ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕವಲಂದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

17 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

53 mins ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

1 hour ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

2 hours ago

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

5 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

5 hours ago