ಮೈಸೂರು : ದುಷ್ಕರ್ಮಿಗಳು ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚುಂಚನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮಾದಯ್ಯನಗುಡಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಈ ಘಟನೆ ನಡೆದಿದೆ. ರಾತ್ರಿಯ ಸಮಯದಲ್ಲಿ ಕಳ್ಳರು ಒಳ ನುಗ್ಗಿ ಬಾಗಿಲು ಮುರಿದು, ಹುಂಡಿಯ ಬೀಗವನ್ನು ಒಡೆದು ಹುಂಡಿಯಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.
ನಿನ್ನೆ ತಾನೇ ಎರಡು ದಿನಗಳ ಕಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆದಿತ್ತು. ಇಂದು ಗ್ರಾಮಸ್ಥರು ಹುಂಡಿ ಎಣಿಕೆ ಕಾರ್ಯ ಮಾಡಬೇಕಾಗಿತ್ತು. ಆದರೆ, ಖದೀಮರು ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕವಲಂದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…