ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಮತ್ತೋರ್ವರು ಬಲಿಯಾಗಿದ್ದಾರೆ.
ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದ್ದು, ಸಂಪತ್ ಕುಮಾರ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ.
ಸಂಪತ್ ಕುಮಾರ್ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು. ಮೂಲತಃ ಚಾಮರಾಜನಗರದ ಯಳಂದೂರು ನಿವಾಸಿಯಾಗಿದ್ದರು. ತಡರಾತ್ರಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.





