ಮೈಸೂರು

ಕಾಯಕ ತತ್ವದ ಶ್ರೇಷ್ಠತೆ ಸಾರಿದ ಹೆಮ್ಮೆಯ ಪರಂಪರೆಯೇ ಮಠಮಾನ್ಯಗಳ ಸಂಸ್ಕೃತಿ: ಬಿ.ವೈ.ವಿಜಯೇಂದ್ರ

ಮೈಸೂರು: ಇಲ್ಲಿನ ಮಾದಹಳ್ಳಿಯಲ್ಲಿ ಇಂದು ಶ್ರೀ ವೀರಭದ್ರೇಶ್ವರ, ಶ್ರೀ ಮಹದೇಶ್ವರ, ಶ್ರೀ ಬಸವೇಶ್ವರಸ್ವಾಮಿ ಮತ್ತು ಶ್ರೀ ಸಿದ್ದಪ್ಪಾಜಿ ದೇವಸ್ಥಾನಗಳ ಜೀರ್ಣೋದ್ಧಾರ, ಅಂಕಸ್ಥಾಪನೆ ಹಾಗೂ ಕಳಶಾರೋಹಣ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ದೇವರ ದರ್ಶನಾಶೀರ್ವಾದ ಪಡೆದರು.

ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ರಮಗಳು ಧರ್ಮ ಪರಂಪರೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಈ ಪರಮ ಪವಿತ್ರ ಕಾರ್ಯಗಳಿಗೆ ಎಲ್ಲರೂ ಕೈಗೊಡಿಸಬೇಕು ಎಂದು ಮನವಿ ಮಾಡಿದರು.

ಸಮಾರಂಭದಲ್ಲಿ ಸುತ್ತೂರು ಶ್ರೀಮಠದ ಶ್ರೀ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವ ಸಿದ್ಧೇಶ್ವರ ಮಹಾಸ್ವಾಮಿಗಳು, ಮಹಾಂತ ಶ್ರೀಗಳು, ಶ್ರೀ ಚನ್ನಬಸವ ಶ್ರೀಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ವಿವಿಧ ಮಠಗಳ ಪರಮಪೂಜ್ಯರು, ಹರಗುರು ಚರಮೂರ್ತಿಗಳು ಹಾಗೂ ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

2 mins ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

11 mins ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

2 hours ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

2 hours ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 hours ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

3 hours ago