ಮೈಸೂರು

ಭೀಕರ ರಸ್ತೆ ಅಪಘಾತ : ಮಹಿಳೆ ತಲೆ ಪಿಸ್‌ ಪಿಸ್‌

ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಜಜ್ಜಿಕೊಂಡು ಹೋಗಿರುವ ಘಟನೆ ಮೈಸೂರು-ಊಟಿ ರಸ್ತೆಯ ನಂಜನಗೂಡಿನ ಮುದ್ದಹಳ್ಳಿ ಬಳಿ ನಡೆದಿದೆ.

ಶನಿವಾರ ಮಧ್ಯಾಹ್ನ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದಾರೆ. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಲಾರಿಯೊಂದ ಮಹಿಳೆಯ ತಲೆಯನ್ನು ಕತ್ತರಿಸಿಕೊಂಡು ಹೋಗಿದೆ. ಪರಿಣಾಮ ದೇಹದಿಂದ ರುಂಡ ಬೇರ್ಪಟ್ಟಿದೆ.

ಘಟನೆ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಲಾರಿ ಮತ್ತೆ ಹಚ್ಚುವ ಕಾರ್ಯ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

3 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

1 hour ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

1 hour ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

2 hours ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

2 hours ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

2 hours ago