ಮೈಸೂರು

ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ : ಶಾಸಕ ಜಿ.ಡಿ ಹರೀಶ್‌ ಗೌಡ

ಮೈಸೂರು : ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ದಿನ ಬೆಳಗಾದರೆ ಕಚ್ಚಾಟ, ತಮ್ಮ ಕಷ್ಟಸುಖಗಳನ್ನು ಪರಿಹರಿಸಿಕೊಳ್ಳಲು ಮುಂದಾಗಿರುವ ಕಾರಣ ರೈತರ ಸಮಸ್ಯೆ ಆಲಿಸಲು ಸಾಧ್ಯವಿಲ್ಲದಂತಾಗಿದೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಆರೋಪಿಸಿದರು.

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮಳೆ ಬಂದು ರೈತರ ಬೆಳೆಗಳು ನಷ್ಟವಾಗಿದೆ. ರೈತರಿಗೆ ಯಾವ ಪ್ರಮಾಣದಲ್ಲಿ ಬೆಳೆ ಪರಿಹಾರ ಕೊಡಬೇಕೆಂದು ಚಿಂತನೆಯನ್ನೇ ಮಾಡಿಲ್ಲ. ಎಷ್ಟುಕೊಡಬೇಕೆಂದು ಚರ್ಚೆಯನ್ನೇ ಮಾಡದೆ ಸರ್ಕಾರ ಕಾಲಾಹರಣ ಮಾಡುತ್ತಿದೆ ಎಂದು ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಕಚ್ಚಾಟವಿದೆ ತಮ್ಮ ಕಷ್ಟ ಸುಖಗಳನ್ನು ಪರಿಹರಿಸಿಕೊಳ್ಳಲು ಮುಂದಾಗಿದ್ದಾರೆ. ಜನರ ಸಮಸ್ಯೆ ಪರಿಹಾರಕ್ಕಿಂತ ತಮ್ಮ ಸಮಸ್ಯೆ ಹೆಚ್ಚಾಗಿದೆ ಎಂದು ಹೇಳಿದರು.

ಉತ್ತರಕರ್ನಾಟಕದ ಭಾಗಗಳಲ್ಲಿ ರೈತರು ಕಣ್ಣೀರು ಹಾಕುತ್ತಿದ್ದಾರೆ. ಮಳೆಯಿಂದಾಗಿ ಆಗಿರುವ ಅನಾಹುತಗಳ ಕುರಿತು ಸರ್ವೆ ಮಾಡಿಲ್ಲ. ಸಚಿವರು ಯಾವುದೇ ಗಮನಹರಿಸಿಲ್ಲ ಎಂದು ಟೀಕಿಸಿದರು.

ಕಾನೂನು ಸುವ್ಯವಸ್ಥೆ ಬಗ್ಗೆ ಹೇಳುವುದೇ ಬೇಡ. ಮೈಸೂರಿನಲ್ಲಿ ಅಮಾಯಕ ಬಾಲಕಿ ಮೇಲೆ ಅತ್ಯಾಚಾರ,ಕೊಲೆ ನಡೆದಿರುವಘಟನೆ ಮನಸ್ಸಿಗೆ ತುಂಬಾ ನೋವಾಗಿದೆ. ಪೊಲೀಸ್ ಇಲಾಖೆ ನಿಯಂತ್ರಣ ತಪ್ಪಿದೆ ಎಂದರು.

ಇದನ್ನೂ ಓದಿ:-ವರುಣನ ಆರ್ಭಟಕ್ಕೆ ನಾಟಿ ಗದ್ದೆಗಳು ಮುಳುಗಡೆ ; ಗ್ರಾಮದ ಮುಖ್ಯರಸ್ತೆಯೂ ಜಲಾವೃತ

ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತರಲು ಯಾವುದೇವಿರೋಧವಿಲ್ಲ. ಆದರೆ, ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಇರಕೂಡದೆಂದು ನಮ್ಮ ಆಗ್ರಹವಾಗಿದೆ. ಎಂಸಿಡಿಸಿಸಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಯಾವ ರೀತಿ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಖುದ್ದು ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಅವರೇ ಚುನಾವಣೆಯನ್ನು ಯಾವ ರೀತಿ ನಡೆಸಿದ್ದೇವೆಂದು ಹೇಳಿರುವುದಕ್ಕಿಂತಲೂ ಬೇರೆ ಸಾಕ್ಷಿ ಬೇಕಾಗಿಲ್ಲ ಎಂದು ನುಡಿದರು.

ಎಂಸಿಡಿಸಿಸಿ ಚುನಾವಣೆಯಲ್ಲಿ ನಾವು ಯಾವ ರೀತಿ ಉತ್ತರ ಕೊಟ್ಟಿದ್ದೇವೆಂದು ಯಾರ‍್ಯಾರಿಗೆ ತಲುಪಬೇಕಿತ್ತೋ ಅದು ತಲುಪಿದೆ. ಕಾಣದ ಕೈಗಳ ಪ್ರಭಾವಯಾವ ರೀತಿ ಕೆಲಸ ಮಾಡಿತ್ತು ಎಂಬುದು ಗೊತ್ತಿದೆ. ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಗೂ-ಜಿಲ್ಲಾ ಸಹಕಾರ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಗೂ ಹೋಲಿಸಲ್ಲ ಎಂದರು. ಸಹಕಾರ ಸಂಘಗಳಿಗೆ ಕಾಲಕಾಲಕ್ಕೆ ಚುನಾವಣೆ ನಡೆಸಬೇಕು ಎಂಬುದು ನಮ್ಮ ನಿಲುವು.ಅದಕ್ಕಾಗಿಯೇ ಚುನಾವಣೆ ನಡೆಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಸರ್ಕಾರದ ಹಸ್ತಕ್ಷೇಪದ ಪರಿಣಾಮ ಮೂರು ಕ್ಷೇತ್ರಗಳ ಚುನಾವಣೆ ವಿಚಾರ ನ್ಯಾಯಾಲಯದಲ್ಲಿದೆ. ಮೂರು ಕ್ಷೇತ್ರಗಳಿಗೆ ಚುನಾವಣೆಯನ್ನೇ ನಡೆಸಲು ಸಾಧ್ಯವಾಗಿಲ್ಲ ಎಂದು ಬೇಸರಿಸಿದರು.

ಸಹಕಾರ ಸಂಘಗಳಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ಸಹಕಾರಿಗಳೇ ನಡೆಸುವಂತಹ ಸಂಸ್ಥೆಗಳು ಉಳಿಯಬೇಕು. ಸರ್ಕಾರ ನಾನಾ ಕಾರಣಕ್ಕಾಗಿ ಸ್ವಾಯತ್ತ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಲು ಮುಂದಾಗುತ್ತಿದೆ ಎಂದು ಅತೃಪ್ತಿವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

44 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago