ಮೈಸೂರು

ದೇಹವೇ ದೇಗುಲ; ದುಶ್ಚಟಗಳಿಂದ ದೂರವಿರಿ : ಶಿವರಾಜು ಸಲಹೆ

ಮೈಸೂರು: ದೇಹ ಎಂಬುದು ದೇಗುಲ ಇದ್ದಂತೆ. ದೇಗುಲವನ್ನು ನೋಡಿದರೆ ಪೂಜ್ಯನೀಯ ಭಾವ ಮೂಡುತ್ತದೆ. ಹೀಗೆಯೆ ನಮ್ಮ ದೇಹವನ್ನು ನೋಡಿಕೊಳ್ಳಬೇಕು. ಆದುದರಿಂದ ಎಲ್ಲಾ ದುಶ್ಚಟಗಳಿಂದ ದೂರವಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಸಲಹೆ ನೀಡಿದರು.

ಮಹಾರಾಜ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾರಾಜ ಪದವಿ ಪೂರ್ವ ಕಾಲೇಜು, ಮೈಸೂರು ಸಹಯೋಗದೊಂದಿಗೆ ಬುಧವಾರ ಆಯೋಜಿಸಲಾಗಿದ್ದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಯಾರಾದರೂ ಏಳಿಗೆ ಕಂಡಿಲ್ಲ ಎಂದರೆ ಅವರು ಯಾವುದಾದರೊಂದು ದುಶ್ಚಟಗಳಿಗೆ ಬಲಿಯಾಗಿರುತ್ತಾರೆ. ಅಂತಹವರಿಗೆ ಸಮಾಜದಲ್ಲಿ ಯಾವುದೇ ರೀತಿಯ ಗೌರವ ಸಿಗುವುದಿಲ್ಲ. ಸಮಾಜದಲ್ಲಿ ನಮಗೆ ಗೌರವ ಸಿಗಬೇಕೆಂದರೆ ಶುಭ್ರವಾಗಿ ಬದುಕಬೇಕು ಹಾಗೂ ದೇಹವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದರು.

ಕಾಲೇಜು ಹಂತಗಳಲ್ಲಿ ವಿದ್ಯಾರ್ಥಿಗಳು ಯಾವ ಸಾಧನೆಯನ್ನಾದರೂ ಮಾಡುವ ಉತ್ಸಾಹದಲ್ಲಿರುತ್ತಾರೆ. ಹೀಗಾಗಿ ಸಾಧನೆಯ ಕಡೆ ಹೆಚ್ಚಿನ ಗಮನ ನೀಡಬೇಕು. ದುಶ್ಚಟಗಳಿಂದ ದೂರವಿರಬೇಕು. ಟಿ.ವಿ, ಮೊಬೈಲ್ ಗಳಿಗೆ ದಾಸರಾದರೆ ಮನೋರೋಗ ತಜ್ಞರ ಸಹಾಯದಿಂದ ಹೊರಬರಬಹುದು. ಆದರೆ ಸಿಗರೇಟ್, ಗಾಂಜಾದಂತಹ ದುಶ್ಚಟಗಳು ರಕ್ತದಲ್ಲಿ ಬೆರೆತು ಹೋದರೆ ಅದರಿಂದ ಹೊರಬರಲು ಬಹಳ ಕಠಿಣ ಎಂದರು.

ವಿದ್ಯಾರ್ಥಿಗಳು ಚಲನಚಿತ್ರದಲ್ಲಿ ಬರುವ ಹೀರೋಗಳನ್ನು ಅನುಕರಣೆ ಮಾಡಬಾರದು. ಇದರಿಂದ ನಮ್ಮ ದೇಹದ ಮೇಲೆ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ. ನಮಗೆ ನಾವೇ ಹೀರೋಗಳಾಗಬೇಕು. ಇತರರಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ಪತ್ರಕರ್ತ ಸಿ.ಕೆ.ಮಹೇಂದ್ರ ಮಾತನಾಡಿ, ಇಂತಹ ಕಾರ್ಯಕ್ರಮ ಎಲ್ಲಾ ಶಾಲೆಗಳಲಿ ನಡೆಯಬೇಕು. ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಪಾಕೆಟ್ ಮನಿ ಸಿಗುತ್ತದೆ. ಇದರಿಂದ ಅವರಿಗೆ ವಿವಿಧ ಆಕರ್ಷೆಣೆಗೆ ಒಳಗಾಗುವ ಹಂತದಲ್ಲಿರುತ್ತಾರೆ. ಈ ವಯಸ್ಸಿನಲ್ಲಿಯೇ ಏನು ಬೇಕಾದರೂ ಕಲಿಯಬಹುದು. ಯಾವ ಸಾಧನೆಯನ್ನಾದರೂ ಮಾಡಬಹುದು ಎಂದರು.

ಮನೋರೋಗ ತಜ್ಞ ಡಾ.ಬಿ.ಎನ್.ರವೀಶ್ ಮಾತನಾಡಿ, ವಿದ್ಯಾಥಿಗಳಲ್ಲಿ ತಾಳ್ಮೆ ಹಾಗೂ ಶ್ರದ್ಧೆ ಕಾಣುತ್ತಿಲ್ಲ. ಇವೆರಡು ಇಲ್ಲ ಎಂದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಿಲ್ಲ.ನಮ್ಮ ಬದುಕಿಗೆ ನಾವೆ ಶಿಲ್ಪಿಗಳಾಗಬೇಕು. ಎಂದಿಗೂ ಕೀಳಿರಮೆ ಇಟ್ಟುಕೊಳ್ಳಬೇಡಿ. ಜೀವನ ಸಂತೋಷದ ಕ್ಷಣಗಳನ್ನು ಅನುಭವಿಸುವುದಕ್ಕೆ ಇರಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಹೋಟೆಲ್ ಊಟದ ಸೇವನೆ ಹೆಚ್ಚಾಗುತ್ತಿದೆ. ಇದು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಮನೆಯಲ್ಲೇ ತಯಾರಿಸಿಸ ಊಟವನ್ನು ಸೇವಿಸಬೇಕು ಎಂದು ಸಲಹೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ ನಾಗರಾಜು, ಮಹಾರಾಜ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಉದಯಶಂಕರ್‌, ತಂಬಾಕು ವಿರೋಧಿ ವೇದಿಕೆ ಸಂಚಾಲಕರಾದ ವಸಂತಕುಮಾರ್ ಮೈಸೂರು ಮಠ್, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ರಮೇಶ್ , ಮಹಾರಾಣಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಗೋವಿಂದ ರಾಜು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago