ಮೈಸೂರು

ದೇಹವೇ ದೇಗುಲ; ದುಶ್ಚಟಗಳಿಂದ ದೂರವಿರಿ : ಶಿವರಾಜು ಸಲಹೆ

ಮೈಸೂರು: ದೇಹ ಎಂಬುದು ದೇಗುಲ ಇದ್ದಂತೆ. ದೇಗುಲವನ್ನು ನೋಡಿದರೆ ಪೂಜ್ಯನೀಯ ಭಾವ ಮೂಡುತ್ತದೆ. ಹೀಗೆಯೆ ನಮ್ಮ ದೇಹವನ್ನು ನೋಡಿಕೊಳ್ಳಬೇಕು. ಆದುದರಿಂದ ಎಲ್ಲಾ ದುಶ್ಚಟಗಳಿಂದ ದೂರವಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಸಲಹೆ ನೀಡಿದರು.

ಮಹಾರಾಜ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾರಾಜ ಪದವಿ ಪೂರ್ವ ಕಾಲೇಜು, ಮೈಸೂರು ಸಹಯೋಗದೊಂದಿಗೆ ಬುಧವಾರ ಆಯೋಜಿಸಲಾಗಿದ್ದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಯಾರಾದರೂ ಏಳಿಗೆ ಕಂಡಿಲ್ಲ ಎಂದರೆ ಅವರು ಯಾವುದಾದರೊಂದು ದುಶ್ಚಟಗಳಿಗೆ ಬಲಿಯಾಗಿರುತ್ತಾರೆ. ಅಂತಹವರಿಗೆ ಸಮಾಜದಲ್ಲಿ ಯಾವುದೇ ರೀತಿಯ ಗೌರವ ಸಿಗುವುದಿಲ್ಲ. ಸಮಾಜದಲ್ಲಿ ನಮಗೆ ಗೌರವ ಸಿಗಬೇಕೆಂದರೆ ಶುಭ್ರವಾಗಿ ಬದುಕಬೇಕು ಹಾಗೂ ದೇಹವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದರು.

ಕಾಲೇಜು ಹಂತಗಳಲ್ಲಿ ವಿದ್ಯಾರ್ಥಿಗಳು ಯಾವ ಸಾಧನೆಯನ್ನಾದರೂ ಮಾಡುವ ಉತ್ಸಾಹದಲ್ಲಿರುತ್ತಾರೆ. ಹೀಗಾಗಿ ಸಾಧನೆಯ ಕಡೆ ಹೆಚ್ಚಿನ ಗಮನ ನೀಡಬೇಕು. ದುಶ್ಚಟಗಳಿಂದ ದೂರವಿರಬೇಕು. ಟಿ.ವಿ, ಮೊಬೈಲ್ ಗಳಿಗೆ ದಾಸರಾದರೆ ಮನೋರೋಗ ತಜ್ಞರ ಸಹಾಯದಿಂದ ಹೊರಬರಬಹುದು. ಆದರೆ ಸಿಗರೇಟ್, ಗಾಂಜಾದಂತಹ ದುಶ್ಚಟಗಳು ರಕ್ತದಲ್ಲಿ ಬೆರೆತು ಹೋದರೆ ಅದರಿಂದ ಹೊರಬರಲು ಬಹಳ ಕಠಿಣ ಎಂದರು.

ವಿದ್ಯಾರ್ಥಿಗಳು ಚಲನಚಿತ್ರದಲ್ಲಿ ಬರುವ ಹೀರೋಗಳನ್ನು ಅನುಕರಣೆ ಮಾಡಬಾರದು. ಇದರಿಂದ ನಮ್ಮ ದೇಹದ ಮೇಲೆ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ. ನಮಗೆ ನಾವೇ ಹೀರೋಗಳಾಗಬೇಕು. ಇತರರಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ಪತ್ರಕರ್ತ ಸಿ.ಕೆ.ಮಹೇಂದ್ರ ಮಾತನಾಡಿ, ಇಂತಹ ಕಾರ್ಯಕ್ರಮ ಎಲ್ಲಾ ಶಾಲೆಗಳಲಿ ನಡೆಯಬೇಕು. ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಪಾಕೆಟ್ ಮನಿ ಸಿಗುತ್ತದೆ. ಇದರಿಂದ ಅವರಿಗೆ ವಿವಿಧ ಆಕರ್ಷೆಣೆಗೆ ಒಳಗಾಗುವ ಹಂತದಲ್ಲಿರುತ್ತಾರೆ. ಈ ವಯಸ್ಸಿನಲ್ಲಿಯೇ ಏನು ಬೇಕಾದರೂ ಕಲಿಯಬಹುದು. ಯಾವ ಸಾಧನೆಯನ್ನಾದರೂ ಮಾಡಬಹುದು ಎಂದರು.

ಮನೋರೋಗ ತಜ್ಞ ಡಾ.ಬಿ.ಎನ್.ರವೀಶ್ ಮಾತನಾಡಿ, ವಿದ್ಯಾಥಿಗಳಲ್ಲಿ ತಾಳ್ಮೆ ಹಾಗೂ ಶ್ರದ್ಧೆ ಕಾಣುತ್ತಿಲ್ಲ. ಇವೆರಡು ಇಲ್ಲ ಎಂದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಿಲ್ಲ.ನಮ್ಮ ಬದುಕಿಗೆ ನಾವೆ ಶಿಲ್ಪಿಗಳಾಗಬೇಕು. ಎಂದಿಗೂ ಕೀಳಿರಮೆ ಇಟ್ಟುಕೊಳ್ಳಬೇಡಿ. ಜೀವನ ಸಂತೋಷದ ಕ್ಷಣಗಳನ್ನು ಅನುಭವಿಸುವುದಕ್ಕೆ ಇರಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಹೋಟೆಲ್ ಊಟದ ಸೇವನೆ ಹೆಚ್ಚಾಗುತ್ತಿದೆ. ಇದು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಮನೆಯಲ್ಲೇ ತಯಾರಿಸಿಸ ಊಟವನ್ನು ಸೇವಿಸಬೇಕು ಎಂದು ಸಲಹೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ ನಾಗರಾಜು, ಮಹಾರಾಜ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಉದಯಶಂಕರ್‌, ತಂಬಾಕು ವಿರೋಧಿ ವೇದಿಕೆ ಸಂಚಾಲಕರಾದ ವಸಂತಕುಮಾರ್ ಮೈಸೂರು ಮಠ್, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ರಮೇಶ್ , ಮಹಾರಾಣಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಗೋವಿಂದ ರಾಜು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

21 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

6 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

6 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

7 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

7 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

23 hours ago