The confluence of the Kaveri and Kapila at the Triveni Sangam
ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಕೆಆರ್ಎಸ್ ಜಲಾಶಯದಿಂದಲೂ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪಟ್ಟಣದ ತಿರುಮಕೂಡಲಿನ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ, ಶ್ರೀ ಗುಂಜಾ ನರಸಿಂಹ ಸ್ವಾಮಿ ಹಾಗೂ ಶ್ರೀ ಭಿಕ್ಷೇಶ್ವರ ದೇವಾಲಯಗಳ ಸಮೀಪ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ.
ತಾಲ್ಲೂಕಿನಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ಕಬಿನಿ ಹಾಗೂ ಕಾವೇರಿ ಜಲಾಶಯಗಳಿಂದ ಒಟ್ಟು 1.25 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಹರಿದು ಬರುತ್ತಿದ್ದು, ಇನ್ನೂ ಹೆಚ್ಚಿನ ನೀರನ್ನು ನದಿಗೆ ಬಿಟ್ಟರೆ ಸಮಸ್ಯೆ ಆಗುವ ಸಂಭವ ಇದೆ.
ಈ ಕುರಿತು ಆಂದೋಲನದೊಂದಿಗೆ ಪ್ರತಿಕ್ರಿಯಿಸಿದ ತಿ.ನರಸೀಪುರ ತಹಸಿಲ್ದಾರ್ ಸುರೇಶಾಚಾರ್, ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳಿಂದ 1.25 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗಿದ್ದು, ತಾಲ್ಲೂಕಿನ ಹೆಮ್ಮಿಗೆ ತೂಗು ಸೇತುವೆ ಮೇಲೆ ಹರಿಯಲು 3-4 ಅಡಿಗಳಷ್ಟೇ ಬಾಕಿ ಇದೆ. ಇದಲ್ಲದೆ ಮಾಲಂಗಿ ಗ್ರಾಮಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ಜಮೀನುಗಳು ಸಹ ಮುಳುಗಡೆಯಾಗಿರುವ ಬಗ್ಗೆ ಮಾಹಿತಿ ಇಲ್ಲ. 1.50 ಲಕ್ಷ ಕ್ಯೂಸೆಕ್ಸ್ಗೂ ಹೆಚ್ಚು ನೀರು ಬಂದರೆ ಜಮೀನುಗಳು ಹಾಗೂ ಮಾಲಂಗಿ, ಹೆಮ್ಮಿಗೆ ಸೇತುವೆ ಮೇಲೆ ನೀರು ಹರಿಯಲು ಆರಂಭಿಸುತ್ತದೆ ಎಂದು ತಿಳಿಸಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…