ಮೈಸೂರು

ತ್ರೀವೇಣಿ ಸಂಗಮದಲ್ಲಿ ಕಾವೇರಿ, ಕಪಿಲೆಯ ಅರ್ಭಟ…

ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದಲೂ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪಟ್ಟಣದ ತಿರುಮಕೂಡಲಿನ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ, ಶ್ರೀ ಗುಂಜಾ ನರಸಿಂಹ ಸ್ವಾಮಿ ಹಾಗೂ ಶ್ರೀ ಭಿಕ್ಷೇಶ್ವರ ದೇವಾಲಯಗಳ ಸಮೀಪ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ.

ತಾಲ್ಲೂಕಿನಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ಕಬಿನಿ ಹಾಗೂ ಕಾವೇರಿ ಜಲಾಶಯಗಳಿಂದ ಒಟ್ಟು 1.25 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಹರಿದು ಬರುತ್ತಿದ್ದು, ಇನ್ನೂ ಹೆಚ್ಚಿನ ನೀರನ್ನು ನದಿಗೆ ಬಿಟ್ಟರೆ ಸಮಸ್ಯೆ ಆಗುವ ಸಂಭವ ಇದೆ.

ಈ ಕುರಿತು ಆಂದೋಲನದೊಂದಿಗೆ ಪ್ರತಿಕ್ರಿಯಿಸಿದ ತಿ.ನರಸೀಪುರ ತಹಸಿಲ್ದಾರ್‌ ಸುರೇಶಾಚಾರ್‌, ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ 1.25 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗಿದ್ದು, ತಾಲ್ಲೂಕಿನ ಹೆಮ್ಮಿಗೆ ತೂಗು ಸೇತುವೆ ಮೇಲೆ ಹರಿಯಲು 3-4 ಅಡಿಗಳಷ್ಟೇ ಬಾಕಿ ಇದೆ. ಇದಲ್ಲದೆ ಮಾಲಂಗಿ ಗ್ರಾಮಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ಜಮೀನುಗಳು ಸಹ ಮುಳುಗಡೆಯಾಗಿರುವ ಬಗ್ಗೆ ಮಾಹಿತಿ ಇಲ್ಲ. 1.50 ಲಕ್ಷ ಕ್ಯೂಸೆಕ್ಸ್‌ಗೂ ಹೆಚ್ಚು ನೀರು ಬಂದರೆ ಜಮೀನುಗಳು ಹಾಗೂ ಮಾಲಂಗಿ, ಹೆಮ್ಮಿಗೆ ಸೇತುವೆ ಮೇಲೆ ನೀರು ಹರಿಯಲು ಆರಂಭಿಸುತ್ತದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

7 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

9 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

10 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

10 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

11 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

11 hours ago